ಬೆಳಗಾವಿ (ಸುವರ್ಣಸೌಧ), ಡಿ.11-ಮಧ್ಯ ಪ್ರದೇಶ, ಛತ್ತೀಸ್ಗಢ, ರಾಜಸ್ಥಾನ ಮೂರು ರಾಜ್ಯಗಳಲ್ಲಿ ಕಾಂಗ್ರೆಸ್ ಗೆಲುವು ನಿರೀಕ್ಷಿತವಾಗಿತ್ತು ಎಂದು ಸಚಿವ ದೇಶಪಾಂಡೆ ಹೇಳಿದರು.
ರಾಹುಲ್ಗಾಂಧಿ ಅವರ ಶ್ರಮಕ್ಕೆ ಪ್ರತಿಫಲ ಸಿಕ್ಕಿದೆ. ಮಹಿಳೆಯರು, ಜನಸಾಮಾನ್ಯರು ಬಿಜೆಪಿ ಪಕ್ಷದಿಂದ ದೂರ ಸರಿಯುತ್ತಿರುವುದು ಈ ಫಲಿತಾಂಶದಿಂದ ಗೊತ್ತಾಗುತ್ತದೆ. ಕಾಂಗ್ರೆಸ್ ಬೆಂಬಲಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸುವುದಾಗಿ ಅವರು ತಿಳಿಸಿದರು.
ಕೇವಲ ಸುಳ್ಳುಗಳು ಬಹಳ ಕಾಲ ನಡೆಯುವುದಿಲ್ಲ ಎಂಬುದಕ್ಕೆ ಚುನಾವಣೆ ಫಲಿತಾಂಶ ಸಾಕ್ಷಿಯಾಗಿದೆ. ಜನರ ಮನಸ್ಸಿನಲ್ಲಿ ಅಚ್ಚಳಿಯದೆ ಉಳಿದಿರುವ ಕಾಂಗ್ರೆಸ್ ಪಕ್ಷವನ್ನು ಮುಕ್ತ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ತಿಳಿಸಿದರು