ಈ ಚುನಾವಣೆ ನಮಗೆ ಎಚ್ಚರಿಕೆ ಗಂಟೆ : ಶಾಸಕ ಸಿ.ಟಿ.ರವಿ

ಬೆಳಗಾವಿ (ಸುವರ್ಣಸೌಧ), ಡಿ.11- ಕಾಂಗ್ರೆಸ್ ವಿಭಜನೆ ತಂತ್ರದಿಂದ ನಮಗೆ ಹಿನ್ನಡೆಯಾಗಿದೆ ಎಂದು ಬಿಜೆಪಿ ಮುಖಂಡ ಸಿ.ಟಿ.ರವಿ ಇಂದಿಲ್ಲಿ ಹೇಳಿದರು.
ಬೆಳಗಾವಿಯ ಸುವರ್ಣಸೌಧದ ಮೊಗಸಾಲೆಯಲ್ಲಿ ಪಂಚರಾಜ್ಯಗಳ ಚುನಾವಣೆ ಸಂಬಂಧ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ ಅವರು, ರಾಜಸ್ಥಾನ, ಛತ್ತೀಸ್‍ಗಢದಲ್ಲಿ ಬಿಜೆಪಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಮಧ್ಯ ಪ್ರದೇಶದಲ್ಲಿ ಸಮಬಲದ ಪೈಪೋಟಿ ನಡೆದಿದೆ. ಹಿಂದುತ್ವದ ನಾಟಕವಾಡಿ ಅವರು ಗೆಲುವು ಸಾಧಿಸಿದ್ದಾರೆ ಎಂದು ಹೇಳಿದರು.

ಈ ಚುನಾವಣೆ ಫಲಿತಾಂಶ ನಮಗೆ ಎಚ್ಚರಿಕೆ ಗಂಟೆಯಾಗಿದೆ. ಒಳ್ಳೆಯದನ್ನು ಮಾಡಿದರೂ ಜನ ಬೇರೆ ಟೇಸ್ಟ್ ಕೇಳುತ್ತಾರೆ. ಈ ಫಲಿತಾಂಶದಿಂದ ಪ್ರಧಾನಿ ನರೇಂದ್ರ ಮೋದಿ ಅವರ ವರ್ಚಸ್ಸು ಕುಗ್ಗಿಲ್ಲ. ನಾವು ಅಧಿಕಾರಕ್ಕಾಗಿ ರಾಜಕಾರಣ ಮಾಡುತ್ತಿಲ್ಲ. ಸಿದ್ಧಾಂತಕ್ಕಾಗಿ ಹುಟ್ಟಿದ್ದೇವೆ. ಅದನ್ನು ಪರಿಪಾಲನೆ ಮಾಡಿದ್ದೇವೆ ಎಂದು ಹೇಳಿದರು.

ಅಲ್ಪಸಂಖ್ಯಾತರ ವೋಟು ನಮಗೆ ಬೇಡವೆಂದು ನಾವು ಹೇಳುವುದಿಲ್ಲ. ರಾಷ್ಟ್ರೀಯತೆ ಹಿನ್ನೆಲೆಯಲ್ಲಿ ಮತ ಕೇಳುತ್ತೇವೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ