ಬಾಗಲಕೋಟೆ: ಸಕ್ಕರೆ ಕಾರ್ಖಾನೆಯಲ್ಲಿರುವ ಡಿಸ್ಟಲರಿ ಸಂಸ್ಕರಣಾ ಘಟಕ ಸ್ಫೋಟ: ನಾಲ್ವರು ಸಾವು

ಬಾಗಲಕೋಟೆ: ಮುಧೋಳ ತಾಲೂಕಿನ ಕುಳಲಿಯಲ್ಲಿರುವ ಸಕ್ಕರೆ ಕಾರ್ಖಾನೆಯಲ್ಲಿರುವ ಡಿಸ್ಟಲರಿ ಸಂಸ್ಕರಣಾ ಘಟಕದಲ್ಲಿ ಭಾರೀ ಸ್ಫೋಟ ಸಂಭವಿಸಿದ ಪರಿಣಾಮ ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ಸ್ಫೋಟದ ತೀವ್ರತೆಗೆ ಘಟಕ ಛಿದ್ರಗೊಂಡಿರುವುದಾಗಿ ತಿಳಿದುಬಂದಿದೆ. ನಾಲ್ವರು ಕಾರ್ಮಿಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಿಲಾಗಿದ್ದು ಎಲ್ಲರ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದು ಬಂದಿದೆ.

ಘಟಕ ಮುರುಗೇಶ್‌ ನಿರಾಣಿ ಅವರ ಒಡೆತನಕ್ಕೆ ಸೇರಿದ್ದಾಗಿದೆ. ಮುಧೋಳ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Bagalakote,kulali,distillery unit,blast

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ