ನಾಡಿನ ಹಲವು ದೇವಾಲಯಗಳಲ್ಲಿ ಇಂದು ವೈಕುಂಠ  ಏಕದಾಶಿಯ ಸಂಭ್ರಮ

ಇಂದು ನಾಡಿನ ಹಲವು ದೇವಾಲಯಗಳಲ್ಲಿ ವೈಕುಂಠ  ಏಕದಾಶಿಯ ಸಂಭ್ರಮ ವೈಕುಂಠ ಎಂದರೆ ವಿಷ್ಣುವಿನ ವಾಸಸ್ಥಳ ಎಂದರ್ಥ ಏಕಾದಶಿ ಎಂದರೆ ಹಿಂದೂ ಪಂಚಾಗದ ಪ್ರಕಾರ ಪಕ್ಷದ ಹನ್ನೋಂದು ದಿನಗಳಿಗೆ ಏಕಾದಶಿ ಎಂದು ಕರೆಯುತ್ತಾರೆ

ಈ ವೈಕುಂಠ ಏಕಾದಶಿಯಂದು ಉಪವಾಸ ದೊಂದಿಗೆ ಮನಸ್ಸಿನ ಇಂದ್ರೀಯಗಳನ್ನಿ ನಿಯಂತ್ರಣದಲ್ಲಿರಿಸಿ ಉತ್ತರ ದಿಕ್ಕಿನಲ್ಲಿರುವ ವೈಕುಂಠ  ದ್ವಾರದ ಮೂಲಕ ಶ್ರೀ ಮಹಾ ವಿಷ್ಣುವಿನ ದರ್ಶನ ಪಡೆದರೆ ಧನ್ಯತಾ ಭಾಗ್ಯ ಲಭಿಸುತ್ತದೆ ಎನ್ನುವ ಪ್ರತೀತಿ ಇದೆ

ಇನ್ನು ಏಕಾದಶಿಯಂದು ಉಪವಾಸ ಮಾಡುವುದರಿಂದ ಮಾನವನ ದೇಹದಲ್ಲಿ ಒಂದು ಆಂತರಿಕ ಪರಿಸರವಿದೆ ಜೀವಕೊಶಗಳ ಬಾಹ್ಯದಲಿ ದ್ರವ ವಿರುತ್ತದೆ ದ್ರವದಲ್ಲಿ ಉಪ್ಪಿನಾಂಶ ಹೆಚ್ಚಿದ್ದು ಸಮುದ್ರದ ನೀರನ್ನು ಹೋಲುತ್ತದೆ ಇದರಿಂದ ದೇಹದ ಆಂತರಿಕ ಪರಿಸರ ಹಾಗೂ ಅಂಗಾಂಗಗಳ ಕ್ರಿಯಾ ಜಾಲವನ್ನು ಸಮ ಮಟ್ಟದಲ್ಲಿರಿಸಿ ಸುರಕ್ಷೀತವಾಗಿಡುತ್ತದೆ ಅಲ್ಲದೆ ದೇಹವು ಮಾನಸಿಕವಾಗಿ ದೈಹಿಕವಾಗಿ ಸದೃಡಗೊಳಿಸುವಲ್ಲಿ ಉಪವಾಸ ವ್ರತ ಮಹತ್ವದ ಪಾತ್ರ ವಹಿಸುತ್ತದೆ ಎಂಬುದು ವಿಜ್ಞಾನದಲ್ಲಿ ತಿಳಿಸಲಾಗಿದೆ

ವೈಕುಂಠ ಏಕಾದಶಿಯ ಬಗ್ಗೆ ಕಥೆಯೊಂದು ಹೀಗಿದೆ: ಭಾಗವತೋತ್ತಮನಾದ ನಂದಗೋಪ ಶ್ರೀಕೃಷ್ಣನ ಸಾನಿಧ್ಯದಲ್ಲಿ, ಏಕಾದಶಿಯ ಉಪವಾಸ ಹಾಗೂ ದ್ವಾದಶಿಯ ಪಾರಣೆಗಳನ್ನು ತಪ್ಪದೆ ಆಚರಿಸುತ್ತಿದ್ದ ಒಮ್ಮೆ ಏಕಾದಶಿವ್ರತ ಆಚರಿಸಿ, ಮರುದಿನ ದ್ವಾದಶಿ ಬಹು ಸ್ವಲ್ಪಕಾಲ ಮಾತ್ರ ಇದ್ದುದ್ದರಿಂದ ಬೆಳಗಿ ಜಾವಕ್ಕೆ  ಮೊದಲು ಯಮುನಾನದಿಯಲ್ಲಿ ಸ್ನಾನಕ್ಕಿಳಿದ. ಅದು ರಾಕ್ಷಸರ ಸಂಚಾರದ ಕಾಲವಾದ್ದರಿಂದ ವರುಣದೇವನ ಸೇವಕನಾದ ರಾಕ್ಷಸ, ನಂದಗೋಪನನ್ನು ವರುಣನ ಬಳಿಗೆ ಎಳೆದೊಯ್ದನು. ಇತ್ತ ನಂದನು ಎಷ್ಟು ಹೊತ್ತಾದರೂ ಸ್ನಾನಕ್ಕೆ ಹೋದವನು ಬಾರದಿರಲು, ಗೋಪಾಲಕುಲದವರೆಲ್ಲಾ ಬಲರಾಮಕೃಷ್ಣರಿಗೆ ಈ ಸುದ್ದಿ ಮುಟ್ಟಿಸಿದರು. ಸರ್ವಜ್ಞನಾದ ಶ್ರೀಕೃಷ್ಣ ಅವರಿಗೆಲ್ಲಾ ಅಭಯವಿತ್ತು ತಂದೆಯವರನ್ನು ಕರೆತರುವುದಾಗಿ ಹೇಳಿ, ವರುಣಲೋಕಕ್ಕೆ ಬಂದನು. ದೇವದೇವನಾದ ಶ್ರೀಕೃಷ್ಣನಿಗೆ ನಮಿಸಿದ ವರುಣ ತನ್ನ ಸೇವಕನಿಂದಾದ ಅಪರಾಧ ಮನ್ನಿಸಬೇಕೆಂದು ಪ್ರಾರ್ಥಿಸಿದ. ಶ್ರೀಕೃಷ್ಣ ವರುಣನನ್ನು ಆಶೀರ್ವದಿಸಿ ತಂದೆಯೊಡನೆ ಗೋಕುಲಕ್ಕೆ ಹಿಂದಿರುಗಿದನು. ನಂದಗೋಪನಿಗೆ ಪರಮಾನಂದವಾಯಿತು. ವರುಣನ ಲೋಕದ ವೈಭವ ಹಾಗೂ ತನ್ನ ಮಗನಾದ ಶ್ರೀಕೃಷ್ಣನಿಗೆ ಸಿಕ್ಕ ಭವ್ಯಸ್ವಾಗತ ಮುಂತಾದವುಗಳನ್ನು ಎಳೆಎಳೆಯಾಗಿ ಬಣ್ಣಿಸಲಾಗಿ ಗೋಪಾಲರಿಗೆಲ್ಲಾ ಹೆಮ್ಮೆ ಎನಿಸಿತು ಆದರೆ ಶ್ರೀಕೃಷ್ಣ ಸಾಕ್ಷತ್ ಪರಮೇಶ್ವರನೇ ನಿಜ ಆದರೆ ಅವನ ನಿಜರೂಫ ಅರಿಯಲಾರೆವು ಎಂದು ಪರಿತಪಿಸಿದರು. ಇದನ್ನರಿತ ಕೃಷ್ಣ, ಎಲ್ಲರಿಗೂ ಯಮುನಾ ನದಿಯಲ್ಲಿದ್ದ ಬ್ರಹ್ಮಕುಂಡವೆಂಬ ಮಡುವಿನಲ್ಲಿ ಮುಳುಗಿಬರುವಂತೆ ತಿಳಿಸಿದ, ಕೃಷ್ಣ ಹೇಳಿದಂತೆ ಮಾಡಿದ ಅವರಿಗೆ  ವೈಕುಂಠದ ದರ್ಶನವಾಯಿತು. ಅವರ ಮನಸ್ಸು ತೃಪ್ತಿಯನ್ನು ಹೊಂದಿತು, ಶ್ರೀಕೃಷ್ಣನು ಪರದೈವವೆಂಬ ಅವರ ನಂಬಿಕೆ ಸ್ಥಿರವಾಯಿತು ಎಲ್ಲರೂ ಧನ್ಯರಾದರು ಬಹುಶಃ ಈ ಕಾರಣಕ್ಕೆ ಏಕಾದಶಿಯನ್ನು “ವೈಕುಂಠಏಕಾದಶಿ” ಎಂದು ಕರೆದಿರಬಹುದೆಂಬ ನಂಬಿಕೆ ಹಲವರಲ್ಲಿದೆ. ಪುರಾಣಗಳಿಗೆ ಮಹತ್ವವಾದ ಸ್ಥಾನವಿದೆ, ಅವು ಜನಜೀವನಕ್ಕೆ ಹೊಂದಿಕೊಂಡು ಹೋಗುವ ವಿಷಯಗಳನ್ನು ಪ್ರತಿಪಾದಿಸುತ್ತವೆ. ಸಾಮಾನ್ಯಜನರಿಗೆ ಅವುಗಳಿಂದ ಉಪಕಾರವಾಗುತ್ತದೆ. ಲೋಕೋಪಕಾರಕ್ಕಾಗಿ ವ್ಯಾಸರು ಹದಿನೆಂಟು ಪುರಾಣಗಳನ್ನು ರಚಿಸಿದರು. ಇಂತಹ ಪುರಾಣಗಳಲ್ಲಿ ನಾರದೀಯ ಪುರಾಣ ಸಹ ಒಂದು ನಾರದರ ಪ್ರೇರಣೆಯಿಂದ ಅನೇಕ ಪವಿತ್ರ ಗ್ರಂಥಗಳ, ಪೂಜೆ ಪುನಸ್ಕಾರಗಳು, ವ್ರತಕಥೆಗಳೂ, ಈ ಜಗತ್ತಿಗೆ ಬಂದಿದೆ ಎಂದರೆ ಅತಿಶಯೋಕ್ತಿ ಆಗಲಾರದು, ಇಂತಹ ಪವಿತ್ರ ವ್ರತಗಳಲ್ಲಿ ಅತ್ಯಂತ ಶ್ರೇಷ್ಠವಾದ, ಶ್ರೇಯಸ್ಕರವಾದ, ಸಕಲರೂ ಸುಲಭದಲ್ಲಿ ಆಚರಿಸಲು ಯೋಗ್ಯವಾದ ವ್ರತ ಏಕಾದಶಿ ವ್ರತ. ಕೃಷ್ಣಾಮೃತಮಹಾರ್ಣವದ ಪ್ರಕಾರ, ಸಕಲ ತೀರ್ಥಕ್ಷೇತ್ರಗಳಿಂದ, ಸಕಲ ಪುಣ್ಯಕ್ಷೇತ್ರಗಳಿಂದ ಲಭಿಸಿದ ಪುಣ್ಯ, ಏಕಾದಶಿಗೆ ಸಮನಾಗಲಾರದು. ವಸಿಷ್ಠರ ಪ್ರಕಾರ, ಹನ್ನೊಂದು ಇಂದ್ರಿಯಗಳಿಂದ ಸಂಪಾದಿಸಿದ ಸಕಲಪಾಪಗಳನ್ನು ಹನ್ನೊಂದನೆಯ ತಿಥಿಯಾದ ಏಕಾದಶಿಯು ಪರಿಹರಿಸುತ್ತದೆ, ಆದ್ದರಿಂದ ಏಕಾದಶಿಗೆ ಸಮವಾದ ಪಾವನವಾದದ್ದು ಯಾವುದೂ ಇಲ್ಲ. ವೈಕುಂಠ ಏಕಾದಶಿಯ ದಿನ ಶ್ರೀಮನ್ನಾರಾಯಣನ ದರ್ಶನ ಮಾಡಿ, ವೈಕುಂಠ ದ್ವಾರದ ಮೂಲಕ ಹೊರ ಬರಬೇಕು. ಹೀಗೆ ಮಾಡಿದ್ರೆ ಸಪ್ತ ಜನ್ಮದಲ್ಲಿ ಮಾಡಿದ ಪಾಪಗಳೂ ನಾಶವಾಗುತ್ತವೆ ಅನ್ನೋದು ನಂಬಿಕೆ. ಅಲ್ಲದೇ ವೈಕುಂಠ ಏಕಾದಶಿಯ ಪವಿತ್ರ ದಿನ ಅಭ್ಯಂಜನ ಮಾಡಿ, ಶ್ರೀನಿವಾಸ ಉತ್ಸವ ಮೂರ್ತಿಯ ಜೋಕಾಲಿಗೆ ತಲೆ ತಾಕಿಸಿ, ವೈಕುಂಠದ್ವಾರದಿಂದ ಹೊರಬಂದರೆ ಮುಕ್ತಿ ಕಟ್ಟಿಟ್ಟ ಬುತ್ತಿ ಅನ್ನುವ ನಂಬಿಕೆಯೂ ಇದೆ.ವೈಕುಂಠ ದ್ವಾರದಲ್ಲಿ ತೋರಿ ಹೋಗುವುದೆಂದರೆ ನಾವು ತಲೆ ಬಾಗಿ ಹೋಗಬೇಕು ತಲೆ ಬಾಗುವುದೆಂದರೆ ನಮ್ಮ ಅಹಂಕಾರವನ್ನು ಕಳೆದು ಕೊಂದಂತೆಯೇ  ಅಂದರೆ ಎಲ್ಲಿಯವರೆಗೆ ನಮ್ಮಲ್ಲಿ ಅಹಂಕಾರವಿರುವುದೊ ಅಲ್ಲಿಯವರೆಗೆ ನಮಗೆ ದೇವರ ದರುಶನ ಸಾಧ್ಯವಿಲ್ಲ ಅದನ್ನು ಕಳೆದುಕೊಂಡ ಕೂಡಲೇ ಇರುವುದೆಲ್ಲಾ ದೈವವೇ  ಆಗುವುದೆಲ್ಲಾ ದೈವ ದರುಶನವೇ…ಏಕಾದಶಿ ಅಂದರೆ ಕೂಡಾ ಇದೇ  ಅರ್ಥ ಬರುತ್ತದೆ  ಏಕಾದಶಿ ಅಂದರೆ ಹನ್ನೊಂದು. ಅಂದರೆ ಹತ್ತು ಭಗವಂತನ ಸಮಸ್ತ  ಸೃಷ್ಟಿಯನ್ನು  ಪ್ರತಿನಿಧಿಸುತ್ತದೆ ಆ ಇನೊಂದು ನಮ್ಮ ವೈಯುಕ್ತಿಕತೆಯನ್ನು ಪ್ರತಿನಿಧಿಸುತ್ತದೆ ಅಂದರೆ ನಮ್ಮ ವಯುಕ್ತಿಕತೆ ಅಂದರೆ ಅಹಂಕಾರ ಅಥವಾ ಮನಸ್ಸು ಇವುಗಳನ್ನು ಕರಗಿಸಿ ಅಥವಾ ಇಲ್ಲವಾಗಿಸಿ ಅಥವಾ ಇಡೀ ವಿಶ್ವದೊಂದಿಗೆ ಸಮ್ಮಿಲನಗೊಲಿಸದ ಹೊರತು ನಮಗೆ ಭಗವಂತನನ್ನು ಕಾಣಲು ದರ್ಶಿಸಲು ಸಾಧ್ಯವಿಲ್ಲಾ ಎಂದರ್ಥ. ಏಕಾದಶಿಯ ಬಗ್ಗೆ ಕೇಳಿರದ, ನಮ್ಮ ಪುರಾಣ ಪರಂಪರೆಗಳ ಬಗೆಗೆ ಏನೂ ಗೊತ್ತಿರದ, ಜಗತ್ಪ್ರಸಿದ್ಧ ಶಸ್ತ್ರಚಿಕಿತ್ಸಾ ವೈದ್ಯ ಅಲೆಕ್ಲಿಸ್ ಕಾರೆಲ್ ತನ್ನ ಖ್ಯಾತಕೃತಿ (ಅವ್ಯಕ್ತ ಮಾನವ)’ದಲ್ಲಿ ಒಂದು ಮಾತು ಹೇಳುತ್ತಾನೆ:  “ಮನುಷ್ಯ ತಿಂಗಳಿಗೊಮ್ಮೆ, ಎರಡು ಬಾರಿ ಸಂಪೂರ್ಣ ನಿರಾಹಾರನಾಗಿರಲು ಕಲಿತರೆ ಅನಾರೋಗ್ಯದ ನಿಮಿತ್ತ ವೈದ್ಯರ ಬಳಿ ಹೋಗಬೇಕಾದ ಅಗತ್ಯವಿಲ್ಲ.  ಹಾಗಾಗಿ 15ದಿನಗಳಿಗೊಮ್ಮೆ 24 ಗಂಟೆಗಳ ಕಾಲ ಪೂರ್ಣ ವಿಶ್ರಾಂತಿ ದೊರಕಿತೆಂದರೆ ಈ ಪಚನೆಂದ್ರಿಯ ಮತ್ತೆ ದಕ್ಷವಾಗಿ ಕೆಲಸ ಮಾಡಲು ಸಿದ್ಧವಾಗುತ್ತದೆ.  ಉಪವಾಸವೇ ದೊಡ್ಡ ಚಿಕಿತ್ಸೆ ಎನ್ನುತ್ತಾನೆ”. ನಮ್ಮ ಪ್ರಾಚೀನ ಭಾರತೀಯರು ಇದೇ ಮಾತನ್ನು ಹೇಳಿದ್ದರು ಅಲೆಕ್ಸಿಸ್ ಕಾರೆಲ್ ಇದನ್ನು ವೈಜ್ಞಾನಿಕವಾಗಿ ಬರೆದರೆ ಪ್ರಾಚೀನರು ಏಕೆ-ಏನು ಅನ್ನೋ ವಿವರ ನೀಡದೆ ವಿಧಿವಾಕ್ಯವಾಗಿ ಬರೆದರು. ಈ ಎಲ್ಲ ದೃಷ್ಟಿಯಿಂದ ಏಕಾದಶಿ ತುಂಬ ಮಹತ್ವದ ದಿನ.  ಅಂದು ವಾತಾವರಣದಲ್ಲಿ ಕೂಡ ಒಂದು ವಿಶಿಷ್ಟ ಶಕ್ತಿ ತುಂಬಿರುತ್ತದೆ.  ಏಕಾದಶಿಯನ್ನು ‘ಹರಿದಿನ’ ಎಂದೂ ಸಹ ಕರೆಯುತ್ತಾರೆ.  ಅಂದು ವೈಷ್ಣವೀಶಕ್ತಿ ಜಾಗೃತವಾಗಿ ಕೆಲಸ ಮಾಡುತ್ತದೆ ಎನ್ನುವುದು ತಾತ್ಪರ್ಯ.

ಗಂಗರಾಜು.ಎನ್. ದೊಡ್ಡಬಳ್ಳಾಪುರ

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ