ತಲೆ ಮರೆಸಿ ಕೊಂಡಿದ್ದ ನಾಗನನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಡಿ.19-ಅತ್ತಿಗೆ ಹಾಗೂ ಆಕೆಯ ಮಗಳ ಮೇಲೆ ಹಲ್ಲೆ ನಡೆಸಿ ತಲೆ ಮರೆಸಿಕೊಂಡಿದ್ದ ನಾಗನನ್ನು ಶ್ರೀರಾಮಪುರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆಲ ದಿನಗಳ ಹಿಂದೆ ತನ್ನ ಅತ್ತಿಗೆ ಹಾಗೂ ಅವರ ಮಗಳ ಮೇಲೆ ಹಲ್ಲೆ ನಡೆಸಿ ತಮಿಳುನಾಡಿನಲ್ಲಿ ತಲೆ ಮರೆಸಿಕೊಂಡಿದ್ದನು.

ಶ್ರೀರಾಮಪುರ ಪೊಲೀಸರಿಗೆ ನಾಗ, ಈತನ ಮಕ್ಕಳಾದ ಶಾಸ್ತ್ರಿ, ಗಾಂಧಿ ತಲೆನೋವಾಗಿ ಪರಿಣಮಿಸಿದ್ದಾರೆ.ಪತ್ತೆಗಾಗಿ ತಮಿಳುನಾಡಿಗೆ ತೆರಳಿದ್ದ ಪೊಲೀಸರಿಗೆ ನಾಗ ಸಿಕ್ಕಿಬಿದಿದ್ದಾನೆ.

ಇಂದು ನ್ಯಾಯಾಲಯಕ್ಕೆ ಆರೋಪಿ ನಾಗನನ್ನು ಹಾಜರುಪಡಿಸುವ ಸಾಧ್ಯತೆ ಇದೆ. ಈ ಪ್ರಕರಣದಲ್ಲಿ ಭಾಗಿಯಾಗಿ ತಲೆಮರೆಸಿಕೊಂಡಿರುವ ಗಾಂಧಿ ಪತ್ತೆಗಾಗಿ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ