ಡಿ.23ರಂದು ಅಂತರಾಷ್ಟ್ರೀಯ ರೈತ ದಿನಾಚರಣೆ ಅಂಗವಾಗಿ ಕೆಂಗಲ್ ಆಂಜನೇಯ ದೇವಾಲಯದ ಆವರಣದಲ್ಲಿ ಕೃಷಿಮೇಳ

ಬೆಂಗಳೂರು,ಡಿ.20- ಅಂತಾರಾಷ್ಟ್ರೀಯ ರೈತರ ದಿನಾಚರಣೆ ಅಂಗವಾಗಿ ಇದೇ 23ರಂದು ಬೆಳಗ್ಗೆ 11 ಗಂಟೆಗೆ ರಾಮನಗರದ ಕೆಂಗಲ್ ಆಂಜನೇಯ ದೇವಸ್ಥಾನದ ಆವರಣದಲ್ಲಿ ಯುವ ಕೃಷಿ ಮೇಳವನ್ನು ನಡೆಸಲಾಗುವುದದು.

ಕರ್ನಾಟಕ ಪ್ರದೇಶ ರೈತ ಯುವಕ ಸಮಾಜ, ಭಾರತ್ ಕೃಷಿ ಸಮಾಜ, ಕೃಷಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ ಎಂದು ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತ ಅಧ್ಯಕ್ಷ ಬಿ.ಕೆ.ಮಂಜುನಾಥ್ ತಿಳಿಸಿದರು.

ಇದೇ ವೇಳೆ ಸೂಪರ್ ಸ್ಟಾರ್ ರೈತ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ತರಬೇತಿ ಮತ್ತು ವಿಚಾರಗೋಷ್ಠಿಯನ್ನು ಹಮ್ಮಿಕೊಂಡಿರುವುದಾಗಿ ತಿಳಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಸ್ಮರಣ ಸಂಚಿಕೆ ಬಿಡುಗಡೆ ಮಾಡಲಿದ್ದಾರೆ. ಕೃಷಿ ಸಚಿವ ಎನ್.ಎಚ್.ಶಿವಶಂಕರ ರೆಡ್ಡಿ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.

ಕರ್ನಾಟಕ ಪ್ರದೇಶ ಕೃಷಿಕ ಸಮಾಜದ ಆಡಳಿತಾಧ್ಯಕ್ಷ ಬಸನಗೌಡ ಪಾಟೀಲ್ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಅವರು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ