ರಾಮಲಿಂಗಾರೆಡ್ಡಿ ಅವರನ್ನು ಸಚಿವರನ್ನಾಗಿ ಮಾಡುವಂತೆ ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆಯಿಂದ ಒತ್ತಾಯ

ಬೆಂಗಳೂರು, ಡಿ.20-ರಾಜ್ಯದ ಹಿರಿಯ ರಾಜಕಾರಣಿ ಹಾಗೂ ಸಜ್ಜನ ವ್ಯಕ್ತಿ ರಾಮಲಿಂಗಾರೆಡ್ಡಿ ಅವರನ್ನು ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡುವಂತೆ ಸುವರ್ಣ ಕರ್ನಾಟಕ ಹಿತರಕ್ಷಣಾ ವೇದಿಕೆ ಒತ್ತಾಯಿಸಿದೆ.

ಪಕ್ಷಾತೀತವಾಗಿ ಜಾತಿ-ಧರ್ಮ ಮೀರಿ ಜನಸೇವೆಯಲ್ಲಿ ನಿರತರಾಗಿರುವ ಸರಳ ಸಜ್ಜನಿಕೆಯ ರಾಮಲಿಂಗಾರೆಡ್ಡಿ ಅವರು ಜನರ ಸಮಸ್ಯೆಗಳಿಗೆ ಸೂಕ್ತ ರೀತಿಯಲ್ಲಿ ಸ್ಪಂದಿಸಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಸದಾ ಮುಂದು.ರಾಜ್ಯ ಸೇರಿದಂತೆ ಬೆಂಗಳೂರಿನ ನಗರದ ಅಭಿವೃದ್ಧಿಯಲ್ಲಿ ಹೆಚ್ಚಿನ ಆಸಕ್ತಿ ಹೊಂದಿರುವ ಅವರಿಗೆ ಈ ಬಾರಿಯ ಸಂಪುಟ ವಿಸ್ತರಣೆ ವೇಳೆ ಅವಕಾಶ ಕಲ್ಪಿಸಬೇಕೆಂದು ಕೋರಿದೆ.

ಬೆಂಗಳೂರು ಉಸ್ತುವಾರಿ ಸಚಿವರಾಗಿ, ಗೃಹ ಸಚಿವರಾಗಿ ಜನ ಮೆಚ್ಚುವ ಆಡಳಿತ ನೀಡಿರುವ ಅವರಿಗೆ ಸಮ್ಮಿಶ್ರ ಸರ್ಕಾರದಲ್ಲೂ ಅವಕಾಶ ಕೊಟ್ಟು ಬೆಂಗಳೂರಿನ ಅಭಿವೃದ್ಧಿಗೆ ಒತ್ತು ನೀಡುವಂತೆ ಕಾಂಗ್ರೆಸ್ ವರಿಷ್ಠರಲ್ಲಿ ಮನವಿ ಮಾಡುವುದಾಗಿ ವೇದಿಕೆ ಗೌರವ ಸಲಹೆಗಾರ ತಲಕಾಡು ಚಿಕ್ಕರಂಗೇಗೌಡ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ