ಸಿಟಿ ಸಿವಿಲ್ ನ್ಯಾಯಾಲಯದಿಂದ ಅತ್ಯಾಚಾರ ಆರೋಪಿಗೆ ಜೀವಾವಧಿ ಶಿಕ್ಷೆ

ಬೆಂಗಳೂರು,ಡಿ.21- ಹನ್ನೆರಡು ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ ಆರೋಪಿಗೆ 14 ವರ್ಷ ಜೀವಾವಧಿ ಶಿಕ್ಷೆ ಹಾಗೂ 20 ಸಾವಿರ ದಂಡ ವಿಧಿಸಿ ಸಿಟಿ ಸಿವಿಲ್ ನ್ಯಾಯಾಲಯ ತೀರ್ಪು ನೀಡಿದೆ.

ಪೀಣ್ಯಾ ಠಾಣೆ ವ್ಯಾಪ್ತಿಯ ಸುವರ್ಣನಗರ ದೊಡ್ಡಬಿದರಕಲ್ಲು ನಾಗಸಂದ್ರದಲ್ಲಿ 2014ರ ಮಾರ್ಚ್ ತಿಂಗಳಿನಲ್ಲಿ 12 ವರ್ಷದ ಬಾಲಕಿ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಸಂತೋಷ್(29) ಶಿಕ್ಷೆಗೊಳಗಾದ ವ್ಯಕ್ತಿ.

ಈತನ ವಿರುದ್ಧ ಪೀಣ್ಯ ಠಾಣೆ ಪೊಲೀಸರು ಪೋಕ್ಸೋ ಕಾಯ್ದೆಯಡಿ ಹಾಗೂ ಜಾತಿ ನಿಂದನೆ ಪ್ರಕರಣ ದಾಖಲಿಸಿದ್ದರು.

ಯಶವಂತಪುರ ಉಪವಿಭಾಗದ ಎಸಿಪಿ ರವಿಪ್ರಸಾದ್ ಆರೋಪಿಯನ್ನು ಬಂಧಿಸಿ ತನಿಖೆ ಪೂರ್ಣಗೊಳಿಸಿ ಆರೋಪಿ ವಿರುದ್ಧ ನಗರದ 70ನೇ ಹೆಚ್ಚುವರಿ ಸಿಟಿ ಸಿವಿಲ್ ಮತ್ತು 71ನೇ ಸಿಸಿಎಚ್ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.

ಈ ಪ್ರಕರಣದಲ್ಲಿ ಸರ್ಕಾರಿ ಅಭಿಯೋಜಕರಾದ ಮೀನಾ ಕುಮಾರಿ ಅವರು ವಾದ ಮಂಡಿಸಿದ್ದರು.

ವಾದವನ್ನು ಆಲಿಸಿದ ನ್ಯಾಯಾಲಯ ವಿಚಾರಣೆ ನಡೆಸಿ ಆರೋಪಿಗೆ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ