ಕಾಂಗ್ರೆಸ್‌ನಲ್ಲಿ ಅತೃಪ್ತಿ ಬಗ್ಗೆ ಯಡಿಯೂರಪ್ಪ ಹೇಳಿದ ಭವಿಷ್ಯ ಏನು?

ಬೆಂಗಳೂರುಸಚಿವ ಸಂಪುಟ ವಿಸ್ತರಣೆಯಾದ ಬಳಿಕ ಕಾಂಗ್ರೆಸ್‌ನಲ್ಲಿ ಅಸಮಾಧಾನ ಭುಗಿಲೇಳಲಿದೆ.ಸಾಕಷ್ಟು ಬದಲಾವಣೆಗಳು ಆಗಲಿವೆ.  ಸಂಜೆಯವರೆಗೆ ಕಾದು ನೋಡೋಣ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಹೇಳಿಕೆ ನೀಡಿದ್ದಾರೆ.

ಶನಿವಾರ ಸುದ್ದಿಗರರೊಂದಿಗೆ ಮಾತನಾಡಿದ ಬಿಎಸ್‌ವೈ  ರಮೇಶ್‌ ಜಾರಕಿಹೊಳಿ ಅವರನ್ನು ಸಚಿವ ಸಂಪುಟದಿಂದ ಕೈ ಬಿಟ್ಟಿರುವುದು ದೊಡ್ಡ ಪರಿಣಾಮ ಬೀರುತ್ತದೆ ಎಂದರು.

ಇಂದು ಪ್ರಮಾಣವಚನವಾಗುವುದೇ ಸಂಶಯ. ರಾಜ್ಯಪಾಲರು ಊರಲ್ಲಿ ಇಲ್ಲ ಎನ್ನುವ ಸುದ್ದಿ ಬಂದಿದೆ. ಆ ಬಗ್ಗೆ ನನಗೆ ಗೊತ್ತಿಲ್ಲ, ಸಂಜೆಯವರೆಗೆ ಕಾದು ನೋಡಬೇಕು ಎಂದರು.

ನಾವು 104 ಮಂದಿ ಶಾಸಕರು ವಿರೋಧಪಕ್ಷದಲ್ಲಿದ್ದು ಕಾದು ನೋಡುತ್ತೇವೆ. ಶಾಸಕಾಂಗ ಪಕ್ಷದ ಸಭೆ ಕರೆದು ವರಿಷ್ಠರೊಂದಿಗೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳುತ್ತೇವೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ