ವಿಷಪ್ರಸಾದ ಆರೋಪಿಗಳ ವಿಚಾರಣೆ ಪೂರ್ಣ… ರಾತ್ರೋರಾತ್ರಿ ಜೈಲಿಗೆ ಶಿಫ್ಟ್ !

ಚಾಮರನಗರ: ಸುಳ್ವಾಡಿ ವಿಷ ಪ್ರಸಾದ ಪ್ರಕರಣದಲ್ಲಿ ಬಂಧಿತರಾಗಿ ಪೊಲೀಸರ ವಶದಲ್ಲಿದ್ದ ನಾಲ್ವರು ಆರೋಪಿಗಳನ್ನು ರಾತ್ರೋರಾತ್ರಿ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

4 ದಿನ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ವಿಚಾರಣೆ ಮುಕ್ತಾಯವಾಗಿದ್ದರಿಂದ 1 ದಿನ ಮುಂಚಿತವಾಗಿಯೇ ಇಮ್ಮಡಿ ಮಹಾದೇವಸ್ವಾಮಿ, ಅಂಬಿಕಾ, ಮಾದೇಶ್ ಮತ್ತು ದೊಡ್ಡಯ್ಯನನ್ನು ಕೊಳ್ಳೇಗಾಲ ಜೆಎಂಎಫ್​ಸಿ  ನ್ಯಾಯಾಧೀಶ ಶ್ರೀಕಾಂತ್ ನಿವಾಸದಲ್ಲಿ ಹಾಜರುಪಡಿಸಲಾಯಿತು.

ಆರೋಪಿಗಳಿಗೆ ಜ.3 ರವರೆಗೆ ನ್ಯಾಯಾಂಗ ಬಂಧನ ವಿಧಿಸಿದ್ದು, ನಾಲ್ವರು ಆರೋಪಿಗಳನ್ನು ಮೈಸೂರಿನ ಕಾರಾಗೃಹಕ್ಕೆ ಕಳುಹಿಸಲಾಗಿದೆ ಎಂದು ಎಎಸ್ಪಿ ಗೀತಾ ಪ್ರಸನ್ನ ತಿಳಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ