ಮನೆ ಬೀಗ ಒಡೆದು ಆಭರಣ ಮತ್ತು ಹಣ ದೋಚಿದ ಕಳ್ಳರು

ಬೆಂಗಳೂರು, ಡಿ.25- ಮನೆಯೊಂದರ ಬೀಗ ಒಡೆದು ಒಳನುಗ್ಗಿದ ಚೋರರು 300 ಗ್ರಾಂ ಆಭರಣ, 17ಸಾವಿರ ಹಣ ಹಾಗೂ ವಿದೇಶಿ ಕರೆನ್ಸಿಯನ್ನು ಕಳ್ಳತನ ಮಾಡಿರುವ ಘಟನೆ ಸಂಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ವರುಣ ಅಪಾರ್ಟ್‍ಮೆಂಟ್‍ನಲ್ಲಿ ಸಾವಿತ್ರಿ ಸತೀಶ್ ಎಂಬುವರು ವಾಸವಾಗಿದ್ದು, ಡಿ.10ರಂದು ಕಾರ್ಯನಿಮಿತ್ತ ಚೆನ್ನೈಗೆ ತೆರಳಿದ್ದರು. ಈ ವೇಳೆ ಕಳ್ಳರು ಇವರ ಮನೆಯ ಬೀಗ ಒಡೆದು ಒಳನುಗ್ಗಿ ಬೀರುವನ್ನು ಮೀಟಿ ಕೈ ಸಿಕ್ಕಿದ ಹಣ, ಆಭರಣದೊಂದಿಗೆ ಪರಾರಿಯಾಗಿದ್ದಾರೆ.

ನಿನ್ನೆ ಸಾವಿತ್ರಿ ಸತೀಶ್ ಅವರು ಮನೆಗೆ ವಾಪಸಾದಾಗಲೇ ಕಳ್ಳತನ ನಡೆದಿರುವುದು ಬೆಳಕಿಗೆ ಬಂದಿದೆ. ತಕ್ಷಣ ಪೊಲೀಸರಿಗೆ ವಿಷಯ ತಿಳಿಸಿದ್ದಾರೆ. ಬೆರಳಚ್ಚುತಜ್ಞರು ಹಾಗೂ ಶ್ವಾನದಳದೊಂದಿಗೆ ಸ್ಥಳಕ್ಕಾಗಮಿಸಿದ ಪೊಲೀಸರು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ