ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡುವ ದಿಟ್ಟ ನಿರ್ಧಾರ ಕೈಗೊಳ್ಳಿ, ಸಿ.ಎಂ.ಗೆ ಒತ್ತಾಯ ಮಾಡಿದ ಎಸ್.ಪಿ.ಪಕ್ಷದ ಅಧ್ಯಕ್ಷ ಚಂದ್ರೇಗೌಡ

ಬೆಂಗಳೂರು,ಡಿ.25- ರಾಜ್ಯದಾದ್ಯಂತ ಅವ್ಯಾಹತವಾಗಿರುವ ಅಕ್ರಮ ಮದ್ಯ ಮಾರಾಟಕ್ಕೆ ತಡೆಯೊಡ್ಡುವ ದಿಟ್ಟ ನಿರ್ಧಾರ ಕೈಗೊಳ್ಳುವಂತೆ ಮುಖ್ಯಮಂತ್ರಿ ಕುಮಾರಸ್ವಾಮಿಯವರಿಗೆ ಸಮಾಜವಾದಿ ಪಕ್ಷದ ಬೆಂಗಳೂರು ನಗರ ಘಟಕದ ಅಧ್ಯಕ್ಷ ಚಂದ್ರೇಗೌಡ ಒತ್ತಾಯಿಸಿದ್ದಾರೆ.

ರಾಜ್ಯದ ಹಲವೆಡೆ ಸಣ್ಣ-ಪುಟ್ಟ ಕಿರಾಣಿ ಅಂಗಡಿ ಹಾಗೂ ಹೊಟೇಲ್‍ಗಳಲ್ಲಿ ಅಕ್ರಮ ಮದ್ಯಮಾರಾಟ ಎಗ್ಗಿಲ್ಲದೇ ಸಾಗಿದೆ. ಅಷ್ಟೇ ಅಲ್ಲದೇ,ಕೆಲವೆಡೆ ಕಳಪೆ ಗುಣಮಟ್ಟದ ಮದ್ಯ ಮಾರಾಟವಾಗುತ್ತಿದೆ.ಇದರಿಂದ ಸಾರ್ವಜನಿಕರು ತೊಂದರೆಗೀಡಾಗುತ್ತಿದ್ದಾರೆ ಎಂದರು.

ಮೀಟರ್ ಬಡ್ಡಿ ದಂಧೆಗೆ ಕಡಿವಾಣ ಹಾಕಿ ಬೀದಿ ಬದಿ ವ್ಯಾಪಾರಿಗಳಿಗೆ ನೆಮ್ಮದಿಯ ಬದುಕು ಕಲ್ಪಿಸಿರುವ ಮುಖ್ಯಮಂತ್ರಿಗಳು ಅಕ್ರಮ ಮದ್ಯ ಮಾರಾಟ ತಡೆಗೂ ದಿಟ್ಟ ನಿರ್ಧಾರ ಕೈಗೊಳ್ಳುವಂತೆ ಚಂದ್ರೇಗೌಡ ಆಗ್ರಹಿಸಿದರು.

ಅಕ್ರಮ ಮದ್ಯ ಮರಾಟಗಾರರು ಎಗ್ಗಿಲ್ಲದೆ ದಂಧೆಯಲ್ಲಿ ತೊಡಗಿದ್ದು,ಸರ್ಕಾರದ ಬೊಕ್ಕಸಕ್ಕೂ ನಷ್ಟ ಉಂಟು ಮಾಡುತ್ತಿದ್ದಾರೆ. ಅಷ್ಟೇ ಅಲ್ಲದೇ ಜನಸಾಮಾನ್ಯರ ಜೀವದ ಜೊತೆ ಚೆಲ್ಲಾಟವಾಡುತ್ತಿದ್ದಾರೆ. ಈ ಬಗ್ಗೆ ಗಂಭೀರ ಚಿಂತನೆ ಅಗತ್ಯವಾಗಿದ್ದು, ಕಠಿಣ ಕಾನೂನು ಕ್ರಮಕ್ಕೆ ಮುಂದಾಗಬೇಕು ಎಂದು ಮನವಿ ಮಾಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ