ದೇವಾಲಯದ ಅಧಿಕಾರಿಗಳ ವಿರುದ್ಧ ಮಾಟ-ಮಂತ್ರ ಆರೋಪ: ಶ್ರೀಶೈಲಂ ಹಿರಿಯ ಅರ್ಚಕರ ಅಮಾನತು

ವಿಜಯವಾಡ: ದೇವಸ್ಥಾನದ ಅಧಿಕಾರಿಗಳ ವಿರುದ್ಧ ಮಾಟ-ಮಂತ್ರ ಮಾಡಿಸಿದ ಆರೋಪದ ಹಿನ್ನಲೆಯಲ್ಲಿ ಪ್ರಮುಖ ಯಾತ್ರಾಸ್ಥಳಗಳಲ್ಲಿ ಒಂದಾದ ಶ್ರೀಶೈಲಂ ನ ಶ್ರೀ ಬ್ರಮರಾಂಭ ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನದ ಹಿರಿಯ ಅರ್ಚಕರನ್ನು ಅಮಾನತುಗೊಳಿಸಲಾಗಿದೆ.

ಕರ್ನೂಲ್ ಜಿಲ್ಲೆಯ ನಲ್ಲಮಲ್ಲ ಅರಣ್ಯದಲ್ಲಿರುವ ಈ ಶಿವ ದೇವಸ್ಥಾನ ಜ್ಯೋತಿರ್ಲಿಂಗ ದೇವಸ್ಥಾನಗಳಲ್ಲಿ ಒಂದಾಗಿದ್ದು, ದೇಶದ ಪ್ರಮುಖ ಯಾತ್ರಾಸ್ಥಳವಾಗಿದೆ.

ದೇವಸ್ಥಾನದ ಕಾರ್ಯಕಾರಿ ಅಧಿಕಾರಿ ಶ್ರೀ ರಾಮಚಂದ್ರ ಮೂರ್ತಿ ಅವರನ್ನು ಹುದ್ದೆಯಿಂದ ಕೆಳಗಿಳಿಸಲು ದೇವಸ್ಥಾನದ ಹಿರಿಯ ಅರ್ಚಕ ಗಂಟಿ ರಾಧಾಕೃಷ್ಣ ಅವರು ಸೋಮವಾರ ರಾತ್ರಿ ದೇವಸ್ಥಾನ ನಗರಿಯ ಎಸ್ಆರ್ ಸಿ 31 ಕ್ವಾಟರ್ಸ್ ನಲ್ಲಿ ಮಾಟ-ಮಂತ್ರ ಮಾಡಿಸಿದ್ದಾರೆ ಎನ್ನಲಾಗಿದೆ.

ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಆಗಮಿಸಿದ ದೇವಸ್ಥಾನದ ಆಡಳಿತ ಮಂಡಳಿಯ ಸದಸ್ಯರು, ಮಾಟ-ಮಂತ್ರ ನಡೆಸಿದ್ದನ್ನು ಗಮನಿಸಿ ಇಂದು ಅರ್ಚಕರ ಅಮಾನತಿಗೆ ಆದೇಶಿಸಿದ್ದಾರೆ.

Srisailam temple, priest, suspended

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ