ವಿಕಲಾಂಗ ವ್ಯಕ್ತಿಯನ್ನು ಥಳಿಸಿದ ಬಿಜೆಪಿ ನಾಯಕ

ಲಖನೌ: ಸಮಾಜವಾದಿ ಪಕ್ಷದ ನಾಯಕ ಮಾಜಿ ಮುಖ್ಯಮಂತ್ರಿ ಅಖಿಲೇಶ್​ ಯಾದವ್​ ಅವರಿಗೆ ಮತ ಚಲಾಯಿಸುತ್ತೇನೆ ಎಂದ ವಿಕಲಾಂಗ ಚೇತನ ವ್ಯಕ್ತಿಗೆ ಉತ್ತರ ಪ್ರದೇಶದ ಬಿಜೆಪಿ ನಾಯಕರೊಬ್ಬರು ಥಳಿಸಿರುವ ಘಟನೆ ನಡೆದಿದ್ದು, ದೇಶಾದ್ಯಂತ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಉತ್ತರ ಪ್ರದೇಶದ ಸಂಭಾಲ್​ ಜಿಲ್ಲೆಯಲ್ಲಿ ಬಿಜೆಪಿ ನಾಯಕ ಮೊಹಮ್ಮದ್​ ಮಿಯಾ ಎಂಬುವವರು ಬಿಜೆಪಿ ವಿರುದ್ಧ ಹೇಳಿಕೆ ನೀಡಿದ ಮತ್ತು ಅಖಿಲೇಶ್​ ಯಾದವ್​ಗೆ ಮತ ಚಲಾಯಿಸುತ್ತೇನೆ ಎಂದು ಹೇಳಿದ ವ್ಯಕ್ತಿಗೆ ದೊಣ್ಣೆಯಿಂದ ಥಳಿಸುತ್ತಿರುವ ವಿಡಿಯೋ ಈಗ ಸಾಮಾಜಿಕ ತಾಣಗಳಲ್ಲಿ ವೈರಲ್​ ಆಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಬಿಜೆಪಿ ನಾಯಕ ಮಿಯಾ, ಆ ವ್ಯಕ್ತಿ ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಕುರಿತು ಅವಹೇಳಕಾರಿ ಹೇಳಿಕೆ ನೀಡಿದ. ನಾನು ಮೊದಲಿಗೆ ಆತನಿಗೆ ತಿಳಿಹೇಳಲು ಪ್ರಯತ್ನಿಸಿದೆ. ಆದರೆ ಆತ ಕುಡಿದಿದ್ದರಿಂದ ನನ್ನ ಮಾತು ಕೇಳಲಿಲ್ಲ. ಆ ಸಂದರ್ಭದಲ್ಲಿ ನಾನು ಆತನನ್ನು ಸ್ಥಳದಿಂದ ತೆರಳುವಂತೆ ತಿಳಿಸುತ್ತಿದ್ದೆನೆ ಹೊರತು ಆತನಿಗೆ ಥಳಿಸಿಲ್ಲ ಎಂದು ತಿಳಿಸಿದ್ದಾರೆ.

ಘಟನೆ ಸಂಬಂಧ ದೂರು ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲು ನಮ್ಮ ತಂಡವನ್ನು ಕಳುಹಿಸಲಾಗಿದೆ ಎಂದು ಸಂಭಾಲ್​ನ ಸರ್ಕಲ್​ ಆಫೀಸರ್​ ಸುದೇಶ್​ ಕುಮಾರ್​ ತಿಳಿಸಿದ್ದಾರೆ.
BJP leader, thrashes disabled man, supporting Akhilesh Yadav

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ