ಕಬಡ್ಡಿ ಆಡುತ್ತಿದ್ದ ವೇಳೆ ಹೃದಯಾಘಾತದಿಂದ ಮೃತಪಟ್ಟ 10ನೇ ತರಗತಿ ವಿದ್ಯಾರ್ಥಿ

ಮೈಸೂರು, ಡಿ.28- ಕಬಡ್ಡಿ ಆಡುತ್ತಿದ್ದ ವಿದ್ಯಾರ್ಥಿಯೊಬ್ಬ ಹೃದಯಾಘಾತದಿಂದ ಸಾವನ್ನಪ್ಪಿರುವಘಟನೆ ನಗರದಲ್ಲಿ ನಡೆದಿದೆ. ಜನತಾ ನಗರದ ಶಾಲೆಯ 10ನೆ ತರಗತಿ ವಿದ್ಯಾರ್ಥಿ ಆಕಾಶ್ (15) ಮೃತ ಬಾಲಕ.

ನಿನ್ನೆ ಶಾಲೆಯಲ್ಲಿಕಬಡ್ಡಿಅಭ್ಯಾಸ ಮಾಡುತ್ತಿದ್ದಾಗ ಆಕಾಶ್ ಕುಸಿದು ಬಿದ್ದಿದ್ದಾನೆ. ಶಿಕ್ಷಕರು ಆತನನ್ನುತಕ್ಷಣ ಖಾಸಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದರೆ ವೈದ್ಯರು ಆತ ಈಗಾಗಲೇ ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿಸಿದ್ದರು. ವಿದ್ಯಾರ್ಥಿ, ಪೋಷಕರು ಈ ಬಗ್ಗೆ ಕುವೆಂಪು ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ