ಎಸಿಬಿ ಅಧಿಕಾರಿಗಳ ವಿರುದ್ಧ ಗರಂ ಆದ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಶ್ರೀಧರ್

ಬೆಂಗಳೂರು,ಡಿ.28- ಎಸಿಬಿ ದಾಳಿಗೊಳಗಾದ ಸಹಕಾರ ಸಂಘಗಳ ಹೆಚ್ಚುವರಿ ನಿಬಂಧಕ ಆರ್.ಶ್ರೀಧರ್ ಅಧಿಕಾರಿಗಳ ವಿರುದ್ಧವೇ ತಿರುಗಿ ಬಿದ್ದಿದ್ದಾರೆ.
ಪದೇ ಪದೇ ಎಸಿಬಿ ಅಧಿಕಾರಿಗಳು ತನ್ನನ್ನೇ ಟಾರ್ಗೆಟ್ ಮಾಡುತ್ತಿದ್ದಾರೆ ಎಂದು ಶ್ರೀಧರ್ ಅಲವತ್ತುಕೊಂಡಿದ್ದಾರೆ.

ಈ ಹಿಂದೆಯೂ ತಮ್ಮ ಮನೆ, ಕಚೇರಿ ಮೇಲೆ ಎಸಿಬಿ ದಾಳಿ ನಡೆಸಿತ್ತು.10 ದಿನಗಳ ಕಾಲ ಜೈಲು ವಾಸ ಅನುಭವಿಸಿದ್ದಾಯಿತು.ಜೈಲಿನಿಂದ ಈಗಷ್ಟೇ ಬಿಡುಗಡೆಯಾಗಿದ್ದೇನೆ. ಆಗಲೇ ಮತ್ತೊಮ್ಮೆ ಎಸಿಬಿ ದಾಳಿ ನಡೆಸುವ ಮೂಲಕ ತನ್ನನ್ನೇ ಟಾರ್ಗೆಟ್ ಮಾಡುತ್ತಿದೆ ಎಂದು ಶ್ರೀಧರ್ ಗರಂ ಆಗಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ