ಯಾರ ಸಂಪರ್ಕಕ್ಕೂ ಸಿಗದ ಮಾಜಿ ಸಚಿವ ಸಚಿವ ರಮೇಶ್ ಜಾರಕಿಹೊಳಿ

ಬೆಳಗಾವಿ,ಡಿ.28- ಸಚಿವ ಸ್ಥಾನ ಕೈತಪ್ಪಿದ್ದರಿಂದ ಪಕ್ಷದ ವಿರುದ್ಧ ಬಂಡಾಯ ಸಾರಿರುವ ಮಾಜಿ ಸಚಿವರಮೇಶ್ ಜಾರಕಿಹೊಳಿಯವರ ಸಂಪರ್ಕಕ್ಕೆ ಕಾಂಗ್ರೆಸ್ ಮುಖಂಡರು ಹರಸಾಹಸ ನಡೆಸಿದ್ದಾರೆ.

ಯಾರ ಕೈಗೂ ಸಿಗದ ರಮೇಶ್ ಜಾರಕಿಹೊಳಿ ಅಜ್ಞಾತ ಸ್ಥಳದಲ್ಲಿದ್ದು ಸಹೋದರ ಸತೀಶ್ ಜಾರಕಿಹೊಳಿಯವರ ಸಂಪರ್ಕಕ್ಕೂ ಸಿಗುತ್ತಿಲ್ಲ. ರಮೇಶ್ ಜಾರಕಿಹೊಳಿ ಹಠವಾದಿ. ಆದರೂ ಸಹೋದರನೊಂದಿಗೆ ಮಾತುಕತೆ ನಡೆಸಿ ಅತೃಪ್ತಿ ಶಮನಗೊಳಿಸಲು ಪ್ರಯತ್ನಿಸುವುದಾಗಿ ಸತೀಶ್ ಜಾರಕಿಹೊಳಿ ತಿಳಿಸಿದ್ದಾರೆ.

ರಮೇಶ್ ಜಾರಕಿಹೊಳಿ ಪಕ್ಷ ಬಿಡುವವರಲ್ಲ. ಅವರ ಸಂಪರ್ಕಕ್ಕಾಗಿ ಸಾಕಷ್ಟು ಪ್ರಯತ್ನಗಳು ನಡೆಯುತ್ತಿವೆ. ಅವರು ಸಿಕ್ಕ ಕೂಡಲೇ ಚರ್ಚೆ ನಡೆಸಿ ಸಮಸ್ಯೆ ಬಗೆ ಹರಿಸುತ್ತೇವೆ. ಪಕ್ಷದ ಹಿತದೃಷ್ಠಿಯಿಂದ ರಮೇಶ್ ಜಾರಕಿಹೊಳಿ ಪಕ್ಷದಲ್ಲೇ ಉಳಿಬೇಕು ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ