ಆಸ್ಪತ್ರೆ ಗೇಟ್ ತೆರೆಯುವಂತೆ ಒತ್ತಾಯಿಸಿ ಸೆಕ್ಯೂರಿಟಿ ಗಾರ್ಡ್ ಮೇಲೆ ಇಬ್ಬರೂ ವ್ಯಕ್ತಿಗಳಿಂದ ಹಲ್ಲೆ

ಬೆಂಗಳೂರು, ಡಿ.28-ತಡವಾಗಿ ಆಸ್ಪತ್ರೆಗೆ ಬಂದು ಗೇಟ್ ತೆರೆಯುವಂತೆ ಒತ್ತಾಯಿಸಿ ಸೆಕ್ಯೂರಿಟಿ ಗಾರ್ಡ್‍ವೊಬ್ಬರ ಮೇಲೆ ಇಬ್ಬರು ವ್ಯಕ್ತಿಗಳು ಹಲ್ಲೆ ನಡೆಸಿರುವ ಘಟನೆ ತಿಲಕ್‍ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಲ್ಲಿನ ಜಯನಗರ ಜನರಲ್ ಆಸ್ಪತ್ರೆಗೆ ರಾತ್ರಿ 11.30ರಲ್ಲಿ ಇಬ್ಬರು ವ್ಯಕ್ತಿಗಳು ಬಂದು, ನಮ್ಮ ಪೇಶೆಂಟ್‍ಗೆ ಊಟ ಕೊಡಬೇಕು ಗೇಟ್ ತೆರೆಯುವಂತೆ ಕರ್ತವ್ಯದಲ್ಲಿದ್ದ ಇಬ್ಬರು ಸೆಕ್ಯೂರಿಟಿ ಗಾರ್ಡ್‍ಗಳಿಗೆ ಕೇಳಿದ್ದಾರೆ.

ಸಮಯ ಮುಗಿದಿದೆ.ಈಗ ಒಳಗೆ ಬಿಡಲು ಸಾಧ್ಯವಿಲ್ಲ ಎಂದು ಹೇಳಿದಾಗ ಆಕ್ರೋಶಗೊಂಡ ಇಬ್ಬರು ವ್ಯಕ್ತಿಗಳು ಒಬ್ಬ ಸೆಕ್ಯೂರಿಟಿ ಗಾರ್ಡ್ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ.

ಹಲ್ಲೆಯಿಂದ ಗಾಯಗೊಂಡ ಸೆಕ್ಯೂರಿಟಿ ಗಾರ್ಡ್ ಹರೀದ್ ಅಹಮ್ಮದ್ ಎಂಬುವರು ತಿಲಕ್‍ನಗರ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ