ಕಾಕಿನಾಡ ಬಂದರಿನಲ್ಲಿ ಕ್ರೇನ್ ಕುಸಿತ: ಓರ್ವ ಸಾವು; 10 ಜನರಿಗೆ ಗಾಯ

ಕಾಕಿನಾಡ: ಆಂಧ್ರಪ್ರದೇಶದ ಕಾಕಿನಾಡ ಬಂದರಿನಲ್ಲಿ ದುರಸ್ಥಿ ಮಾಡಲಾಗುತ್ತಿದ್ದ ಎರಡು ಬೃಹತ್ ಕ್ರೇನ್ ಕುಸಿದುಬಿದ್ದ ಪರಿಣಾಮ ಓರ್ವ ಮೃತಪಟ್ಟಿದ್ದು, ಹತ್ತುಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.

ಮೃತನನ್ನು ಪಶ್ಚಿಮ ಗೋದಾವರಿ ಜಿಲ್ಲೆಯ ಕೊವೂರು ಗ್ರಾಮದ ವಿಟೈಪಲ್ಲಿ ಲಕ್ಷ್ಮಣ್ ಕುಮಾರ್ (35 ) ಎಂದು ಗುರುತಿಸಲಾಗಿದೆ.

ಕಾಕಿನಾಡ ಬಂದರಿನಲ್ಲಿ ಹಡಗುಗಳಿಂದ ಸರಕು ಮತ್ತು ಸಾಮಾಗ್ರಿಗಳನ್ನು ಇಳಿಸುವ , ತುಂಬುವ ಕೆಲಸದಲ್ಲಿ ಕೆಲಸಗಾರರು ನಿರತರಾಗಿದ್ದಾಗ ಇದಕ್ಕಾಗಿ ಬಳಸುತ್ತಿದ್ದ ಬೃಹತ್ ಗಾತ್ರದ ಕ್ರೇನ್ ಗಳು ಹಠಾತ್ತನೇ ಕುಸಿದಿವೆ. ಬೆಳಗ್ಗೆ 10-30ರ ಸಮಯದಲ್ಲಿ ಈ ದುರ್ಘಟನೆ ಸಂಭವಿಸಿದೆ.

ಕೂಡಲೇ ಸ್ಥಳಕ್ಕೆ ಧಾವಿಸಿದ ಅಗ್ನಿ ಮತ್ತು ಸುರಕ್ಷತಾ ವಿಭಾಗದ ಸಿಬ್ಬಂದಿ ಹಾಗೂ ಪೊಲೀಸರು ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರಗೆ ದಾಖಲಿಸಲಾಗಿದೆ.

Kakinada Seaport,Cranes collapse, killing one, 10 injured

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ