ರಾಜ್ಯಸಭೆಯಲ್ಲಿ ಇಂದು ತ್ರಿವಳಿ ತಲಾಖ್​ ವಿಧೇಯಕಕ್ಕೆ ಸಿಗುತ್ತಾ ಅಂಗೀಕಾರ?     

ನವದೆಹಲಿ: ಲೋಕಸಭೆಯಲ್ಲಿ ತ್ರಿವಳಿ ತಲಾಖ್ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದೆ. ಆದರೆ, ರಾಜ್ಯಸಭೆಯಲ್ಲಿ ಇಂದು ವಿಧೇಯಕ ಮಂಡನೆಯಾಗಿ ಚರ್ಚೆ ನಡೆಯಲಿದೆ. ಕಳೆದ ಬಾರಿ ಲೋಕಸಭೆಯಲ್ಲಿ ವಿಧೇಯಕಕ್ಕೆ ಅಂಗೀಕಾರ ಸಿಕ್ಕಿದ್ದರೂ, ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತ ಇಲ್ಲದೇ ಇರುವುದರಿಂದ ಅಂಗೀಕಾರಗೊಂಡಿರಲಿಲ್ಲ. ಹೀಗಾಗಿ ಸರ್ಕಾರ ತ್ರಿವಳಿ ತಲಾಖ್​ ಕಾಯ್ದೆಗೆ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಿತ್ತು.

ಈ ನಡುವೆ, ಬಿಜೆಪಿ ಮತ್ತು ಕಾಂಗ್ರೆಸ್​ ತನ್ನ ಸದಸ್ಯರಿಗೆ ರಾಜ್ಯಸಭೆಯಲ್ಲಿ ಕಡ್ಡಾಯವಾಗಿ ಹಾಜರಿರುವಂತೆ ಸೂಚಿಸಿದೆ. ಈ ಸಂಬಂಧ ಇವತ್ತು ಬಿಸಿ ಬಿಸಿ ಚರ್ಚೆ ನಡೆಯಲಿದೆ.  ಲೋಕಸಭೆಯಲ್ಲಿ ಜಂಟಿ ಸದನ ಸಮಿತಿ ರಚನೆಗೆ ಪ್ರತಿಪಕ್ಷಗಳು ಒತ್ತಾಯಿಸುವ ಸಾಧ್ಯತೆ ಇದೆ. ಲೋಕಸಭೆಯಲ್ಲಿನ ನಿರ್ಣಯಕ್ಕೆ ಬದ್ಧವಾಗಿರುವ ಸಾಧ್ಯತೆಗಳಿವೆ.

ಎಐಎಡಿಎಂಕೆ ಸಹ ಬಿಲ್​ ವಿರೋಧಿಸಿದೆ.  ರಾಜ್ಯಸಭೆಯಲ್ಲಿ ಸರ್ಕಾರಕ್ಕೆ ಬಹುಮತದ ಕೊರತೆ ಇದೆ. ಹೀಗಾಗಿ ವಿಧೇಯಕಕ್ಕೆ ಅಂಗೀಕಾರ ಸಿಗುತ್ತಾ ಅನ್ನೋ ಕುತೂಹಲವಿದೆ.

 

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ