ಹಿರಿಯ ನಟ ಲೋಕನಾಥ್​​ ನಿಧನ: ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಅವಕಾಶ

ಬೆಂಗಳೂರುಕನ್ನಡ ಚಿತ್ರರಂಗದ ಹಿರಿಯ ನಟ ಸಿ.ಎಚ್​​ ಲೋಕನಾಥ್​​ ಇನ್ನಿಲ್ಲ. 1000ಕ್ಕೂ ಹೆಚ್ಚು ನಾಟಕಗಳು ಹಾಗೂ 650ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದ ಈ ಮೇರು ಕಲಾವಿದ, ಇಂದು ಬೆಳಗಿನ ಜಾವ ಹೃದಯಾಘಾತದಿಂದ ಇಹಲೋಕ ತ್ಯಜಿಸಿದ್ಧಾರೆ. ಸುಮಾರು 5 ದಶಕಕ್ಕೂ ಹೆಚ್ಚು ಕಾಲ ಕಲಾಸೇವೆ ಮಾಡಿದ್ದ ಹಿರಿಯ ಕಲಾವಿದ, ಸಂಸ್ಕಾರ, ಗೆಜ್ಜೆಪೂಜೆ, ಭೂತಯ್ಯನ ಮಗ ಅಯ್ಯು, ಬಂಗಾರದ ಮನುಷ್ಯ, ಮಿಂಚಿನ ಓಟ, ನಾಗರ ಹಾವು ಎಂಬ ಅದ್ಭುತ ಸಿನಿಮಾಗಳಲ್ಲಿ ನಟಿಸಿ ಸೈ ಎನಿಸಿಕೊಂಡಿದ್ದರು. ಸದ್ಯ ನಮ್ಮನ್ನ ಅಗಲಿದ ಲೋಕನಾಥ್​​ ಪಾರ್ಥಿವ ಶರೀರವನ್ನು ರವೀಂದ್ರ ಕಲಾಕ್ಷೇತ್ರದಲ್ಲಿ ಅಂತಿಮ ದರ್ಶನಕ್ಕೆ ಇಡಲಾಗಿದೆ. ಮಧ್ಯಾಹ್ನ 12 ರಿಂದ 2.30 ರವರೆಗೂ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ