ಕೃಷಿ ಹೊಂಡ ಪರಿಶೀಲಿಸಿ ಮೆಚ್ಚುಗೆ ವ್ಯಕ್ತಪಡಿಸಿದ ಕೃಷಿ ಸಚಿವ

ಧಾರವಾಡ: ತಾಲೂಕಿನ ಹೆಬ್ಬಳ್ಳಿ ಗ್ರಾಮದಲ್ಲಿ ಕೃಷಿ ಭಾಗ್ಯ ಯೋಜನೆಯಡಿ ನಿರ್ಮಿಸಿರುವ ಕೃಷಿ ಹೊಂಡಗಳನ್ನು ಕೃಷಿ ಸಚಿವ ಎನ್. ಹೆಚ್. ಶಿವಶಂಕರ ರೆಡ್ಡಿ ವೀಕ್ಷಿಸಿ ರೈತರೊಂದಿಗೆ ಚರ್ಚಿಸಿದರು.

ಹೆಬ್ಬಳ್ಳಿ ಗ್ರಾಮ ಪಂಚಾಯತ್​ ಕಚೇರಿಗೆ ಭೇಟಿ ನೀಡಿ ರೈತರೊಂದಿಗೆ ಯೋಜನೆ ಬಗ್ಗೆ ಚರ್ಚೆ ನಡೆಸಿ, ವಿಶೇಷವಾಗಿ ಹೊಂಡಗಳಿಗೆ ಸುರಕ್ಷತೆ ದೃಷ್ಠಿಯಿಂದ ನಿರ್ಮಿಸಿರುವ ತಂತಿ ಬೇಲಿಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

ಈ ಸಮಯದಲ್ಲಿ ಶಾಸಕರಾದ ಅಮೃತ ಅ. ದೇಸಾಯಿ, ಜಿಲ್ಲಾ ಪಂಚಾಯತ್​ ಸದಸ್ಯ ಸಿ.ಬಿ. ಮಟ್ಟಿ, ತಾಲೂಕು ಪಂಚಾಯತ್ ಸದಸ್ಯ ಮಲ್ಲಪ್ಪ ಭಾವಿಕಟ್ಟಿ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಟಿ.ಎಸ್. ರುದ್ರೇಶಪ್ಪ ಹಾಗೂ ತಾಲೂಕಿನ ಸಹಾಯಕ ಕೃಷಿ ನಿರ್ದೇಶಕ ಸಿ.ಜಿ. ಮೇತ್ರಿ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ