ರಾಜ್ಯದ ಜನತೆಗೆ ಹೊಸವರ್ಷದ ಶುಭಾಶಯ ಕೋರಿದ ಮುಖ್ಯಮಂತ್ರಿ ಕುಮಾರಸ್ವಾಮಿ

ಬೆಂಗಳೂರು,ಜ.1- ಸಂಮೃದ್ಧ, ಸಮಗ್ರ ಕರ್ನಾಟಕ ನಿರ್ಮಾಣದ ಸಂಕಲ್ಪದೊಂದಿಗೆ ನೂತನ ವರ್ಷವನ್ನು ಸ್ವಾಗತಿಸೋಣ ಎಂದಿರುವ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ನಾಡಿನ ಸಮಸ್ತ ಜನತೆಗೆ ಹೊಸ ವರ್ಷದ ಶುಭಾಶಯ ಕೋರಿದ್ದಾರೆ.

ರೈತರ ಮೊಗದಲ್ಲಿ ತೃಪ್ತಿಯ ನಗು, ನಿರುದ್ಯೋಗಿಗಳ ಕಣ್ಣಲ್ಲಿ ಭರವಸೆಯ ಬೆಳಕು, ದುರ್ಬಲ ವರ್ಗದವರ ಎದೆಯಲ್ಲಿ ಭದ್ರತೆಯ ಭಾವ, ಹಳ್ಳಿ, ಪಟ್ಟಣ, ನಗರಗಳಲ್ಲಿ ಅಭಿವೃದ್ಧಿಯ ಹೊಂಗನಸು ಸಾಕಾರಗೊಳಿಸುವ ನಿಶ್ಚಯದೊಂದಿಗೆ ನೂತನ ವರ್ಷಕ್ಕೆ ಅಡಿಯಿಡುವ ಯಶಸ್ಸು ನಮ್ಮೆಲ್ಲರದಾಗಲಿ ಎಂದು ಆಶಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ