ಬೆಂಗಳೂರು, ಜ.1- ಜಲಸಂಪನ್ಮೂಲ ಸಚಿವ ಡಿ.ಕೆ.ಶಿವಕುಮಾರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರಿಗೆ ಭೇಟಿ ಮಾಡಿ ಹೊಸ ವರ್ಷದ ಶುಭಾಶಯ ತಿಳಿಸಿದ್ದಾರೆ.
ಕಾಂಗ್ರೆಸ್ನ ಅತ್ಯುನ್ನತ ನಾಯಕರಲ್ಲೊಬ್ಬರಾಗಿದ್ದ ಎಸ್.ಎಂ.ಕೃಷ್ಣ ಅವರು ಕಾಂಗ್ರೆಸ್ನಲ್ಲಿನ ಬೆಳವಣಿಗೆಗಳಿಂದ ಬೇಸತ್ತು ಪಕ್ಷ ತೊರೆದು ಬಿಜೆಪಿ ಸೇರಿದರು. ಆನಂತರ ಕಾಂಗ್ರೆಸ್ ನಾಯಕರು ಎಸ್.ಎಂ.ಕೃಷ್ಣ ಅವರಿಂದ ಅಂತರ ಕಾಯ್ದುಕೊಂಡಿದ್ದರು.
ಒಂದು ಕಾಲಕ್ಕೆ ಡಿ.ಕೆ.ಶಿವಕುಮಾರ್ ಅವರಿಗೆ ಎಸ್.ಎಂ.ಕೃಷ್ಣ ಅವರು ರಾಜಕೀಯ ಗುರುವಾಗಿದ್ದರು. ಇಂದು ತಮ್ಮ ರಾಜಕೀಯ ಗುರು ಅವರನ್ನು ಡಿ.ಕೆ.ಶಿವಕುಮಾರ್ ಭೇಟಿ ಮಾಡಿ ಆಶೀರ್ವಾದ ಪಡೆದುಕೊಳ್ಳುವ ಮೂಲಕ ಕುತೂಹಲ ಕೆರಳಿಸಿದ್ದಾರೆ.