ನಾಳೆ ವೀರಶೈವ ಲಿಂಗಾಯಿತ ಸಂಭಾಗಣದಲ್ಲಿ ರಾಜ್ಯ ಮಟ್ಟದ ವೀರಗಾಸೆ ರತ್ನ ಪ್ರಶಸ್ತಿ ಪುರಸ್ಕಾರ ಸಮಾರಂಭ:

ಬೆಂಗಳೂರು, ಜ.4- ಪ್ರಶಾಂತ್ ಕಲ್ಲೂರ್ ನೇತೃತ್ವದ ವೀರಶೈವ ಲಿಂಗಾಯತ ಯುವ ವೇದಿಕೆ ವತಿಯಿಂದ ಪ್ರತಿಷ್ಠಿತ ರಾಜ್ಯ ಮಟ್ಟದ ವೀರಗಾಸೆ ರತ್ನ ಪ್ರಶಸ್ತಿ ಪುರಸ್ಕಾರ ಸಮಾರಂಭ ನಾಳೆ (ಜ.5)ಸಂಜೆ 5 ಗಂಟೆಗೆ ಸಂಜಯನಗರದಲ್ಲಿರುವ ವೀರಶೈವ ಲಿಂಗಾಯತ ಸಭಾಂಗಣದಲ್ಲಿ ನಡೆಯಲಿದೆ.

ಆಧುನೀಕರಣದ ಭರಾಟೆಯಲ್ಲಿ ನಶಿಸುತ್ತಿರುವ ಕಲೆಯನ್ನು ಉಳಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಬಂದಂತಹ ನೂರಾರು ಅರ್ಜಿಗಳಲ್ಲಿ ಆಯ್ಕೆ ಮಾಡಿ ಈ ವರ್ಷ ರಾಜ್ಯದ ನಾನಾ ಭಾಗಗಳಿಂದ 60 ವೀರಗಾಸೆ ಕಲಾವಿದರನ್ನು ಆಯ್ಕೆ ಮಾಡಲಾಗಿದೆ.

ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ಡಾ.ಶ್ರೀ ಯತೀಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ವಹಿಸಲಿದ್ದಾರೆ ಎಂದು ವೇದಿಕೆ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ.
ಹೆಚ್ಚಿನ ಮಾಹಿತಿಗಾಗಿ 7899999989 ಸಂಪರ್ಕಿಸಬಹುದು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ