ನಾಳೆ ರವೀಂದ್ರ ಕಲಾ ಕ್ಷೇತ್ರದಲ್ಲಿ 531ನೇ ಕನಕದಾಸರ ಜಯಂತಿ ಪ್ರಯುಕ್ತ ಪೌರಾಣಿಕ ನಾಟಕ

ಬೆಂಗಳೂರು,ಜ.5-ಅಖಿಲ ಕರ್ನಾಟಕ ಯುವ ಕುರುಬರ ಒಕ್ಕೂಟದ ಪ್ರಥಮ ವಾರ್ಷಿಕೋತ್ಸವ ಮತ್ತು 531ನೇ ಕನಕದಾಸರ ಜಯಂತೋತ್ಸವದ ಅಂಗವಾಗಿ ನಾಳೆ ಬೆಳಗ್ಗೆ 11 ಗಂಟೆಗೆ ರವೀಂದ್ರ ಕಲಾಕ್ಷೇತ್ರದ ಅಕ್ಕಬುಕ್ಕರ ವೇದಿಕೆಯಲ್ಲಿ ಭೀಮನ ಬಲ-ಧುರ್ಯೋಧನನ ಛಲ ಎಂಬ ಪೌರಾಣಿಕ ನಾಟಕ ಪ್ರದರ್ಶನ ಏರ್ಪಡಿಸಲಾಗಿದೆ.

ಧಾರವಾಡದ ಮನಸೂರಿನ ಸುಕ್ಷೇತ್ರಶ್ರೀ ರೇವಣ್ಣಸಿದ್ದೇಶ್ವರ ಮಹಾಮಠದ ಶ್ರೀ ಬಸವರಾಜ ದೇವರು ಅವರ ಸಾನಿಧ್ಯದಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ವಿಶ್ವನಾಥ್ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದು, ಅಧ್ಯಕ್ಷತೆಯನ್ನು ವಿಧಾನಪರಿಷತ್ ಸದಸ್ಯ ಎಚ್.ಎಂ.ರೇವಣ್ಣ ವಹಿಸಲಿದ್ದಾರೆ. ಈ ಸಂದರ್ಭದಲ್ಲಿ ಮಾಜಿ ಉಪಮುಖ್ಯಮಂತ್ರಿ ಕೆ.ಎಸ್.ಈಶ್ವರಪ್ಪ ಉಪಸ್ಥಿತರಿರುವರು.

ಇದೇ ಸಂದರ್ಭದಲ್ಲಿ ಹಂಪಿ ಕನ್ನಡ ವಿಶ್ವವಿದ್ಯಾಲಯದ ಉಪಕುಲಪತಿಗಲಾ ಡಾ.ಮಲ್ಲಿಕಾ ಘಂಟಿ ಅವರನ್ನು ಸನ್ಮಾನಿಸಲಾಗುತ್ತಿದ್ದು, ಮುಖ್ಯ ಅತಿಥಿಗಳಾಗಿ ಬಿಬಿಎಂಪಿ ಸದಸ್ಯೆ ಶಾಂತಕುಮಾರಿ, ಜಿಪಂ ಸದಸ್ಯೆ ಕುಸುಮ ಶಿವಮಾದಯ್ಯ,ಜೆಡಿಎಸ್‍ಮುಖಂಡ ಡಿ.ಉಮಾಶಂಕರ್, ಅಪಾರ ಸಾರಿಗೆ ಆಯುಕ್ತ ಸಿ.ಪಿ.ನಾರಾಯಣಸ್ವಾಮಿ, ಯೋಜನಾ ಇಲಾಖೆಯ ಜಂಟಿ ನಿರ್ದೇಶಕ ವಿ.ರವಿ, ಕನ್ನಡ ವಿವಿಯ ಸಹಾಯಕ ಕುಲಸಚಿವರಾದ ಎಚ್.ಶ್ರೀನಿವಾಸ್ ಆಗಮಿಸಲಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ