ಕೆಅರ್ ಎಸ್ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಷೇದಕ್ಕೆ ಒತ್ತಾಯಿಸಿ ಕರ್ನಾಟಕ ಜನರ ವೇದಿಕೆಯಿಂದ ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

ಬೆಂಗಳೂರು,ಜ.5 ನಾಡಿನ ಜನರ ಜೀವನಾಡಿ ಆಗಿರುವ ಕೃಕಷ್ಣರಾಜಸಾಗರ ಸುತ್ತಮುತ್ತ ನಡೆಯುತ್ತಿರುವ ಅಕ್ರಮ ಗಣಿಗಾರಿಕೆ ನಿಷೇಧಿಸುವಂತೆ ಒತ್ತಾಯಿಸಿ ಕರ್ನಾಟಕ ಜನರ ವೇದಿಕೆ ಇದೇ 9ರಂದು ಶ್ರೀರಂಗಪಟ್ಟಣದಲ್ಲಿ ಕಾವೇರಿ ನದಿಗಿಳಿದು ಪ್ರತಿಭಟನೆ ನಡೆಸುತ್ತಿದೆ.

ಕೆಆರ್‍ಎಸ್ ಸುತ್ತಮು 20 ಕಿ.ಮೀ ವ್ಯಾಪ್ತಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದು, ಇದರಿಂದ ಕೆಆರ್‍ಎಸ್ ಡ್ಯಾಂಗೆ ಅಪಾಯವಾಗುತ್ತದೆ. ಕೂಡಲೇ ಇದನ್ನು ನಿಷೇಧಿಸಬೇಕೆಂದು ವೇದಿಕೆ ಒತ್ತಾಯಿಸಿದೆ.

ಈ ಬಗ್ಗೆ ಹಲವಾರು ಬಾರಿ ಮುಖ್ಯಮಂತ್ರಿ ಕುಮಾರಸವಾಮಿಗೆ ಮನವಿ ಸಲ್ಲಿಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ. ಹೀಗಾಗಿ ಮತ್ತೊಮ್ಮೆ ಸರ್ಕಾರದ ಗಮನಸೆಳೆದು ಅಕ್ರಮ ಗಣಿಗಾರಿಕೆ ತಡೆಗೆ 9ರಂದು ಕಾವೇರಿ ನದಿಗಿಳಿದು ಬೆಳಗ್ಗೆಯಿಂದ ಸಂಜೆಯವರೆಗೆ ಪ್ರತಿಭಟನೆ ನಡೆಸಲಾಗುವುದು ಎಂದು ವೇದಿಕೆ ತಿಳಿಸಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ