ಸದನದ ಕಲಾಪಕ್ಕೆ ಅಡ್ಡಿ ಮಾಡಿ ಅನುಚಿತ ವರ್ತನೆ ತೋರಿದ ಮೂರು ಎಐಎಡಿಎಂಕೆ ಸದಸ್ಯರು ಅಮಾನತು

ನವದೆಹಲಿ, ಜ.7 (ಪಿಟಿಐ)- ಸದನದ ಕಲಾಪಕ್ಕೆ ಅಡ್ಡಿ ಮಾಡಿ ಅನುಚಿತ ವರ್ತನೆ ತೋರಿದ ಇನ್ನೂ ಮೂರು ಎಐಎಡಿಎಂಕೆ ಸದಸ್ಯರು ಮತ್ತು ಓರ್ವ ಟಿಡಿಪಿ ಸಂಸದರನ್ನು ಲೋಕಸಭಾಧ್ಯಕ್ಷೆ ಸುಮಿತ್ರಾ ಮಹಾಜನ್ ಇಂದು ಅಮಾನತುಗೊಳಿಸಿದ್ಧಾರೆ.

ಸದನದಲ್ಲಿ ಇಂದು ಕಲಾಪ ಆರಂಭವಾಗುತ್ತಿದ್ದಂತೆ ಎಐಎಡಿಕೆ ಮತ್ತು ಟಡಿಪಿ ಸದಸ್ಯರು ಮೇಕೆದಾಟು ಮತ್ತು ಆಂಧ್ರಪ್ರದೇಶಕ್ಕೆ ವಿಶೇಷ ಪ್ಯಾಕೇಜ್‍ಗಾಗಿ ಆಗ್ರಹಿಸಿ ಪ್ರತಿಭಟನೆ ಮುಂದುವರಿಸಿದರು.

ಸದಸ್ಯರ ವರ್ತನೆಗೆ ಬೇಸತ್ತ ಸ್ಪೀಕರ್ ಸುಗಮ ಕಲಾಪಕ್ಕೆ ಅವಕಾಶ ನೀಡುವಂತೆ ಮನವಿ ಮಾಡಿದರು. ಆದರೆ ಸದಸ್ಯರು ಪ್ರತಿಭಟನೆ ಮುಂದುವರಿಸಿದ್ದರಿಂದ ಅವರು ಇಂದು ನಾಲ್ವರು ಸದಸ್ಯರನ್ನು ಅಮಾನತುಗೊಳಿಸಿದರು.

ಕಳೆದ ವಾರ ಸುಮಿತ್ರಾ ಮಹಾಜನ್ 45 ಸದಸ್ಯರನ್ನು ಸಸ್ಪೆಂಡ್ ಮಾಡಿದ್ದರು,

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ