ಶೇ.10ರಷ್ಟು ಮೀಸಲಾತಿ : ಮೇಲ್ಜಾತಿ ವರ್ಗಗಳನ್ನು ಓಲೈಸಲು ಮತ್ತು ಅವರ ಮತ ಬ್ಯಾಂಕ್‍ಗಳನ್ನು ಸೆಳೆಯಲು ಪ್ರಧಾನಿ ಮೋದಿ ತಂತ್ರ : ಮಾಯಾವತಿ

ನವದೆಹಲಿ, ಜ.8-ಆರ್ಥಿಕವಾಗಿ ಹಿಂದುಳಿದ ಮೇಲ್ವರ್ಗದವರಿಗೆ ಶಿಕ್ಷಣ ಮತ್ತು ಸರ್ಕಾರಿ ಹುದ್ದೆಗಳಲ್ಲಿ ಶೇ.10ರಷ್ಟು ಮೀಸಲಾತಿ ನೀಡುವ ವಿಧೇಯಕವನ್ನು ಕೇಂದ್ರ ಸರ್ಕಾರ ಇಂದು ಲೋಕಸಭೆಯಲ್ಲಿ ಮಂಡಿಸಿ ಅನುಮೋದನೆಗೆ ಕೋರಿದೆ.

ನಿನ್ನೆ ಪ್ರಧಾನಮಂತ್ರಿ ನರೇಂದ್ರ ಮೋದಿ ಅಧ್ಯಕ್ಷತೆಯಲ್ಲಿ ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ವಿಧೇಯಕಕ್ಕೆ ಸಮ್ಮತಿ ನೀಡಲಾಗಿತ್ತು. ಅದರಂತೆ ಇಂದು ಲೋಕಸಭೆಯಲ್ಲಿ ಈ ಮಸೂದೆ ಮಂಡಿಸಲಾಗಿದೆ.

ಚುನಾವಣಾ ಸ್ಟಂಟ್:
ಈ ಮಸೂದೆ ಬಗ್ಗೆ ಟೀಕಿಸಿರುವ ಮಾಜಿ ಮುಖ್ಯಮಂತ್ರಿ ಮತ್ತು ಬಹುಜನ ಸಮಾಜ ಪಕ್ಷದ ನಾಯಕಿ ಮಾಯಾವತಿ , ಇದು ಮುಂಬರುವ ಲೋಕಸಭಾ ಚುನಾವಣೆ ಹಿನ್ನೆಲೆಯ ಎಲೆಕ್ಷನ್ ಸ್ಟಂಟ್ ಮತ್ತು ಪೊಲಿಟಿಕಲ್ ಗಿಮಿಕ್ ಎಂದು ಟೀಕಿಸಿದ್ದಾರೆ.

ಮೇಲ್ಜಾತಿ ವರ್ಗಗಳನ್ನು ಓಲೈಸಲು ಮತ್ತು ಅವರ ಮತ ಬ್ಯಾಂಕ್‍ಗಳನ್ನು ಸೆಳೆಯಲು ಪ್ರಧಾನಿ ಮೋದಿ ಅನುಸರಿಸಿರುವ ತಂತ್ರ ಇದಾಗಿದೆ ಎಂದು ಅವರು ಆರೋಪಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ