ಕುತೂಹಲಗಳಿಗೆ ಎಡೆ ಮಾಡಿಕೊಟ್ಟ ಮಾಜಿ ಸಿಎಂ.ಯಡಿಯೂರಪ್ಪ ಅವರ ದಿಢೀರ್ ದೆಹಲಿ ಭೇಟಿ

ಬೆಂಗಳೂರು,ಜ.8- ಮಾಜಿ ಮುಖ್ಯಮಂತ್ರಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಇಂದು ದಿಢೀರ್ ದೆಹಲಿಗೆ ತೆರಳಿರುವುದು ಹಲವು ಕುತೂಹಲಗಳಿಗೆ ಎಡೆಮಾಡಿಕೊಟ್ಟಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಬುಲಾವ್ ಮೇರೆಗೆ ಯಡಿಯೂರಪ್ಪ ದೆಹಲಿಗೆ ತೆರಳಿದ್ದು, ಸಂಜೆ ಕೇಂದ್ರ ನಾಯಕರ ಜೊತೆ ಲೋಕಸಭಾ ಚುನಾವಣೆ ಸಂಬಂಧ ಚರ್ಚೆ ನಡೆಸಲಿದ್ದಾರೆ.

ತುಮಕೂರಿಗೆ ಅಮಿತ್ ಷಾ ಭೇಟಿ ರದ್ದಾದ ಹಿನ್ನೆಲೆ ಯಡಿಯೂರಪ್ಪನವರೇ ದೆಹಲಿಗೆ ತೆರಳಿದ್ದಾರೆ. ಜೊತೆಗೆ ಸಂಸದ ರಾಘವೇಂದ್ರ ಕೂಡ ದೆಹಲಿಗೆ ಪ್ರಯಾಣಿಸಿದ್ದಾರೆ.

ಸಿಗಂದೂರು ಸೇತುವೆ ಬಗ್ಗೆ ಅಂತಿಮ ಸಭೆಯಲ್ಲಿ ಪಾಲ್ಗೊಳ್ಳುವ ಸಂಬಂಧ ರಾಘವೇಂದ್ರ ತೆರಳಿದ್ದು, ಕೇಂದ್ರ ಸಚಿವ ನಿತಿನ್ ಗಡ್ಕರಿ ಜೊತೆ ಸಭೆ ನಡೆಸಲಿದ್ದಾರೆ.
ಮತ್ತೊಂದೆಡೆ ಯಡಿಯೂರಪ್ಪನವರು ಪ್ರಯಾಣಿಸಿದ ವಿಮಾನದಲ್ಲೇ ಸಚಿವ ಡಿ.ಕೆ.ಶಿವಕುಮಾರ್ ಕೂಡ ದೆಹಲಿಗೆ ಪ್ರಯಾಣಿಸಿರುವುದು ಸಾಕಷ್ಟು ಕುತೂಹಲ ಮೂಡಿಸಿದೆ..

ಡಿಕೆಶಿಯವರು ಐಡಿ ನೋಟೀಸ್ ಬಳಿಕ ಯಡಿಯೂರಪ್ಪ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರ ಎಂಬ ಗುಮಾನಿಯೂ ವ್ಯಕ್ತವಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ