ಇಸ್ಮೀಟ್ ಆಡುತ್ತಿದ್ದ 10 ಮಂದಿಯನ್ನು ಬಂಧಿಸಿದ ಸಿಸಿಬಿ ಪೊಲೀಸರು

ಬೆಂಗಳೂರು, ಜ.9-ಹಣವನ್ನು ಪಣವಾಗಿ ಕಟ್ಟಿಕೊಂಡು ಜೂಜಾಡುತ್ತಿದ್ದ ಅಡ್ಡೆ ಮೇಲೆ ಸಿಸಿಬಿ ಪೆÇಲೀಸರು ದಾಳಿ ಮಾಡಿ 1.11 ಲಕ್ಷ ರೂ. ಹಣವನ್ನು ವಶಪಡಿಸಿಕೊಂಡಿದ್ದಾರೆ.

ಮಹದೇವಪುರ ಪೆÇಲೀಸ್ ಠಾಣೆ ವ್ಯಾಪ್ತಿಯ ಬಿ.ನಾರಾಯಣಪುರ, ಕಾಮಧೇನು ಲೇಔಟ್‍ನ 2ನೆ ಕ್ರಾಸ್‍ನಲ್ಲಿನ ಖಾಲಿ ನಿವೇಶನದ ಶೆಡ್‍ವೊಂದರಲ್ಲಿ 8 ರಿಂದ 10 ಮಂದಿ ಸೇರಿಕೊಂಡು ಜೂಜಾಡುತ್ತಿದ್ದ ಬಗ್ಗೆ ಸಿಸಿಬಿ ಪೆÇಲೀಸರಿಗೆ ಮಾಹಿತಿ ಲಭಿಸಿದೆ.

ತಕ್ಷಣ ಕಾರ್ಯಪ್ರವೃತ್ತರಾದ ಪೆÇಲೀಸರು ಸ್ಥಳದ ಮೇಲೆ ದಾಳಿ ಮಾಡಿ 10 ಮಂದಿಯನ್ನು ವಶಕ್ಕೆ ಪಡೆದು ಪಣಕ್ಕಿಟ್ಟಿದ್ದ ಹಣವನ್ನು ವಶಪಡಿಸಿಕೊಂಡಿದ್ದಾರೆ.
ಈ ಸಂಬಂಧ ಮಹದೇವಪುರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ