ಭಾರತ್ ಬಂದ್ ಹಿನ್ನೆಲೆ: ಗದಗದಲ್ಲಿ ಬಸ್ ನಿಲ್ದಾಣ ಸ್ವಚ್ಛಗೊಳಿಸಿದ ಅಧಿಕಾರಿ, ಸಿಬ್ಬಂದಿ

ಗದಗ: 2ನೇ ದಿನದ ಭಾರತ್ ಬಂದ್ ಹಿನ್ನೆಲೆಯಲ್ಲಿ ಬಸ್ ನಿಲ್ದಾಣದಲ್ಲಿ ಪ್ರಯಾಣಿಕರಿಲ್ಲದ ಹಿನ್ನಲೆಯಲ್ಲಿ ಬಸ್ ನಿಲ್ದಾಣ ಸ್ವಚ್ಛತಾ ಕಾರ್ಯದಲ್ಲಿ ಅಧಿಕಾರಿಗಳು ತೊಡಗಿರುವ ಘಟನೆ ನಡೆದಿದೆ.

ಗದಗನ ಕೇಂದ್ರ ಬಸ್ ನಿಲ್ದಾಣದಲ್ಲಿ ಈ ದೃಶ್ಯ ಕಂಡುಬಂದಿದೆ. ಬಂದ್ ಹಿನ್ನಲೆಯಲ್ಲಿ ಪ್ರಯಾಣಿಕರಿಲ್ಲದೇ ಖಾಲಿ ಖಾಲಿಯಾಗಿದ್ದು, ಕೈಯಲ್ಲಿ ಪೊರಕೆ, ಸಲಿಕೆ ಹಿಡಿದ ಗದಗ ಕೇಂದ್ರ ಬಸ್ ನಿಲ್ದಾಣದ ಮೇಲ್ವಿಚಾರ ಅಧಿಕಾರಿ ವರ್ಗ ಹಾಗೂ ಸಿಬ್ಬಂದಿಗಳು ಇಡೀ ಬಸ್ ನಿಲ್ದಾಣವನ್ನು ನೀರು ಹೊಡೆದು ಕಸ ಗುಡಿಸಿ ಸ್ವಚ್ಛಗೊಳಿಸಿದ್ದಾರೆ.

ಕೆಎಸ್‌ಆರ್‌ಟಿಸಿ ಸಿಬ್ಬಂದಿ ಸ್ವಚ್ಛತಾ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇನ್ನು ಚಿಕ್ಕಮಗಳೂರಿನಲ್ಲಿ ಭಾರತ್ ಬಂದ್ ನ ಎರಡನೇ ದಿನವೂ ನೀರಸ ಪ್ರತಿಕ್ರಿಯೆ ಕಂಡು ಬಂದಿದೆ. ಸರ್ಕಾರಿ ಬಸ್ ಗಳು ಎಂದಿನಂತೆ ಸೇವೆ ಆರಂಭಿಸಿವೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ