ವ್ಯಕ್ತಿಯ ಕೈಯಿಂದ ಮೊಬೈಲ್ ಕಸಿದು ಪರಾರಿಯಾದ ಕಳ್ಳರು

ಬೆಂಗಳೂರು, ಜ.9- ಮೊಬೈಲ್‍ನಲ್ಲಿ ಮಾತನಾಡುತ್ತ ಹೋಗುತ್ತಿದ್ದ ವ್ಯಕ್ತಿಯ ಕೈಯಿಂದ ಮೊಬೈಲ್ ಎಗರಿಸಿರುವ ಘಟನೆ ವಿಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಮಾರೇನಹಳ್ಳಿಯಲ್ಲಿ ಕುಮಾರ್ ಎಂಬುವವರು ನಿನ್ನೆ ಸಂಜೆ 5.50ರ ಸುಮಾರಿಗೆ ಮೊಬೈಲ್‍ನಲ್ಲಿ ಮಾತನಾಡುತ್ತ ನಡೆದು ಹೋಗುತ್ತಿದ್ದಾಗ ಬೈಕ್‍ನಲ್ಲಿ ಹಿಂಬಾಲಿಸಿದ ಇಬ್ಬರು ಕಳ್ಳರು ಇವರ ಕೈಯಿಂದ ಮೊಬೈಲ್ ಎಗರಿಸಿ ಪರಾರಿಯಾಗಿದ್ದಾರೆ.
ಸಹಾಯಕ್ಕಾಗಿ ಕುಮಾರ್ ಕೂಗಿಕೊಂಡರಾದರೂ ಅಷ್ಟರಲ್ಲಾಗಲೇ ಮೊಬೈಲ್ ಕಳ್ಳರು ಪರಾರಿಯಾಗಿದ್ದರು. ಈ ಬಗ್ಗೆ ವಿಜಯನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ