ಕ್ಯಾಬ್ ಅಡ್ಡಗಟ್ಟಿದ ದರೋಡೆಕೋರರಿಂದ ಮೊಬೈಲ್ಗಳ ದರೋಡೆ

ಬೆಂಗಳೂರು,ಜ.9-ಕ್ಯಾಬ್‍ನ್ನು ಅಡ್ಡಗಟ್ಟಿದ ದರೋಡೆಕೋರರು ಮೂವರ ಮೊಬೈಲ್‍ಗಳನ್ನು ಕಸಿದು ಪರಾರಿಯಾಗಿರುವ ಘಟನೆ ಜಯನಗರ ಪೆÇಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಇಂದು ಬೆಳಗಿನ ಜಾ 2.25ರ ಸಮಯದಲ್ಲಿ ಕ್ಯಾಬ್ ಚಾಲನೆ ಮಾಡಿಕೊಂಡು ಸಂತೋಷ್ ಎಂಬುವರು ಬಿಎಸ್‍ಕೆ ಬಸ್ ನಿಲ್ದಾಣದ ಬಳಿ ಬಂದಿದ್ದಾರೆ.

ಈ ವೇಳೆ ಪ್ರಯಾಣಿಕರಾದ ಜಯಂತ್, ಕೌಶಿಕ್ ಎಂಬುವರು ಕ್ಯಾಬ್‍ಹತ್ತಿದ್ದಾರೆ. ಸ್ವಲ್ಪ ದೂರ ಹೋಗುತ್ತಿದ್ದಂತೆ ಬೈಕ್‍ನಲ್ಲಿ ಬಂದ ದರೋಡೆಕೋರರು ಕ್ಯಾಬ್‍ನ್ನು ಅಡ್ಡಗಟ್ಟಿ ಬೆದರಿಸಿ ಮೂವರ ಬಳಿಯಿದ್ದ ಮೊಬೈಲ್ ಕಸಿದುಕೊಂಡು ಪರಾರಿಯಾಗಿದ್ದಾರೆ.
ಈ ಬಗ್ಗೆ ಕ್ಯಾಬ್ ಚಾಲಕ ಸಂತೋಷ್ ಜಯನಗರ ಠಾಣೆಗೆ ದೂರು ನೀಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ