ಕೊಲೆ ನಡೆದ ಕೆಲವೇ ಗಂಟೆಗಳಲ್ಲಿ ಐವರು ಆರೋಪಿಗಳನ್ನು ಬಂಧಿಸಿದ ಪೊಲೀಸರು

ತುಮಕೂರು, ಜ.9- ಕೊರಟಗೆರೆ ತಾಲೂಕಿನ ಜಟ್ಟಿ ಅಗ್ರಹಾರ ಬಳಿ ಬೆಂಗಳೂರಿನ ವ್ಯಕ್ತಿಯನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿರುವ ಆರೋಪಿಗಳ ಪೈಕಿ ಐದು ಮಂದಿಯನ್ನು ಘಟನೆ ನಡೆದ ಕೆಲವೇ ಗಂಟೆಗಳಲ್ಲಿ ಬಂಧಿಸುವಲ್ಲಿ ಪೆÇಲೀಸರು ಯಶಸ್ವಿಯಾಗಿದ್ದು, ಉಳಿದವರಿಗಾಗಿ ಶೋಧ ಮುಂದುವರಿದಿದೆ.

ದೇವರಾಯನದುರ್ಗ ಅರಣ್ಯ ಪ್ರದೇಶದ ಕೆರೆ ಬಳಿ ಕಾರು ನಿಲ್ಲಿಸಿಕೊಂಡು ಮದ್ಯಪಾನ ಮಾಡುತ್ತಿದ್ದ ಐದು ಮಂದಿ ಆರೋಪಿಗಳು ಪೆÇಲೀಸರ ಬಲೆಗೆ ಬಿದ್ದಿದ್ದು, ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಬೆಂಗಳೂರಿನ ಕಾಮಾಕ್ಷಿಪಾಳ್ಯದ ನಿವಾಸಿ ಮನು (38) ಎಂಬಾತನನ್ನು ದುಷ್ಕರ್ಮಿಗಳು ನಡುರಸ್ತೆಯಲ್ಲಿ ಭೀಕರವಾಗಿ ಕೊಲೆ ಮಾಡಿ ಪರಾರಿಯಾಗಿದ್ದರು.

ಕೊರಟಗೆರೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ವಿಶೇಷ ಪೆÇಲೀಸ್ ತಂಡ ತನಿಖೆ ಕೈಗೊಂಡಾಗ, ಈತ ಶಾಸಕರೊಬ್ಬರ ತಮ್ಮನ ಮಗಳನ್ನು ಕರೆದುಕೊಂಡು ಮನೆ ಬಿಟ್ಟು ಹೋಗಿ ಮದುವೆ ಮಾಡಿಕೊಂಡಿರುವುದಾಗಿ ಫೇಸ್‍ಬುಕ್‍ನಲ್ಲಿ ವಿಡಿಯೋ ಹಾಕಿರುವುದನ್ನು ಪೆÇಲೀಸರು ಗಮನಿಸಿ, ಇದು ಮರ್ಯಾದಾ ಹತ್ಯೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿದೆ.

ಆರೋಪಿಗಳು ಜಾಡು ಹಿಡಿದು ತನಿಖೆ ಕೈಗೊಂಡ ತನಿಖಾ ತಂಡ ಆರೋಪಿಗಳ ಬಗ್ಗೆ ಮಾಹಿತಿ ಕಲೆ ಹಾಕಿ ಘಟನೆ ನೆಡದ ಕೆಲವೇ ಗಂಟೆಗಳಲ್ಲಿ ಐದು ಮಂದಿಯನ್ನು ಬಂಧಿಸಿ ತೀವ್ರ ವಿಚಾರಣೆಗೊಳಪಡಿಸಿದ್ದಾರೆ.

ಕೊರಟಗೆರೆ ವಿಶೇಷ ಪೆÇಲೀಸ್ ತಂಡದ ವೃತ್ತ ನಿರೀಕ್ಷಕ ನದಾಫ್ ನೇತೃತ್ವದ ತಂಡದ ಕಾರ್ಯವೈಖರಿ ಬಗ್ಗೆ ಎಸ್‍ಪಿ ಡಾ.ದಿವ್ಯಾ ಗೋಪಿನಾಥ್ ಹಾಗೂ ಡಿವೈಎಸ್‍ಪಿ ಸೇರಿದಂತೆ ಹಿರಿಯ ಅಧಿಕಾರಿಗಳು ಪ್ರಶಂಸೆ ವ್ಯಕ್ತಪಡಿಸಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ