ನಾಳೆ ನೀರಿನ ಅದಾಲತ್ ನಡೆಸಲಿರುವ ಜಲಮಂಡಳಿ

ಬೆಂಗಳೂರು, ಜ.10- ಬೆಂಗಳೂರು ಜಲಮಂಡಲಿಯ ಸಕಾನಿಅ(ಪೂರ್ವ-2) ಉಪವಿಭಾಗದಲ್ಲಿ ನೀರಿನ ಬಿಲ್ಲು, ನೀರು ಮತ್ತು ಒಳಚರಂಡಿ ಸಂಪರ್ಕ ಕಲ್ಪಿಸುವಲ್ಲಿನ ವಿಳಂಬ, ಗೃಹ ಬಳಕೆಯಿಂದ ಗೃಹೇತರ ಬಳಕೆಗೆ ಪರಿವರ್ತನೆ ವಿಳಂಬ ಮತ್ತಿತರ ಕುಂದು-ಕೊರತೆಗಳಿಗೆ ಸಂಬಂಧಿಸಿದಂತೆ ನೀರಿನ ಅದಾಲತ್‍ಅನ್ನು ನಾಳೆ(ಜ.11)ಬೆಳಿಗ್ಗೆ 9.30 ರಿಂದ 11 ಗಂಟೆಯವರೆಗೆ ನಡೆಸಲಾಗುತ್ತದೆ.

ನಾಳೆ ಸಕಾನಿಅ(ಪೂರ್ವ-2) ಉಪವಿಭಾಗ ವ್ಯಾಪ್ತಿಯ ಎಇಸಿಎಸ್ ಲೇಔಟ್, ಹೂಡಿ, ಭುವನೇಶ್ವರಿನಗರ ಸೇವಾ ಠಾಣೆ ವ್ಯಾಪ್ತಿಯ ಕುಂದು-ಕೊರತೆಗಳಿಗೆ ಸಂಬಂಧಿಸಿದಂತೆ ಸಮಸ್ಯೆಗಳನ್ನು ಬಿ.ಇ.ಎಂ.ಎಲ್ ಲೇಔಟ್, ಐ.ಟಿ.ಪಿ.ಎಲ್, ಕುಂದಲಹಳ್ಳಿ ಮುಖ್ಯ ರಸ್ತೆ ಹತ್ತಿರ. ಇಲ್ಲಿನ ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಪೂರ್ವ-2) ಕಚೇರಿಯಲ್ಲಿ ಪರಿಶೀಲಿಸಿ ಬಗೆಹರಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ನಿರ್ವಾಹಕ ಅಭಿಯಂತರರು (ಪೂರ್ವ): 22945158. ಸಹಾಯಕ ಕಾರ್ಯ ನಿರ್ವಾಹಕ ಅಭಿಯಂತರರು (ಪೂರ್ವ-2) ಉಪವಿಭಾಗ- 22945115 ಸಂಪರ್ಕಿಸಬಹುದು.

ಕುಂದು ಕೊರತೆಗಳಿಗೆ ಸಂಬಂಧಿಸಿದಂತೆ ಮಂಡಲಿಯ 24/7 ದೂರು ನಿರ್ವಹಣಾ ಕೇಂದ್ರದ ದೂ.ಸಂ.-22238888, ಸಹಾಯವಾಣಿ 1916 ಹಾಗೂ ವಾಟ್ಸ್‍ಆಪ್ ಸಂಖ್ಯೆ-8762228888ಗೆ ಸಂಪರ್ಕಿಸಬಹುದಾಗಿದೆ.
ಸಾರ್ವಜನಿಕರು ಮೇಲಿನ ಸಮಸ್ಯೆಗಳನ್ನು ಬಗೆಹರಿಸಿಕೊಳ್ಳಲು ಈ ನೀರಿನ ಅದಾಲತ್ ಸೌಲಭ್ಯವನ್ನು ಬಳಸಿಕೊಳ್ಳ ಬಹುದಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ