ಜ.12ರಂದು ರಾಜ್ಯಮಟ್ಟದ ಯುವ ರೆಡ್ ಕ್ರಾಸ್ ರಸಪ್ರಶ್ನೆ ಕಾರ್ಯಕ್ರಮ

ಬೆಂಗಳೂರು,ಜ.10- ಭಾರತೀಯ ರೆಡ್‍ಕ್ರಾಸ್ ಸಂಸ್ಥೆ ವತಿಯಿಂದ ರಾಷ್ಟ್ರೀಯ ಯುವ ದಿನಾಚರಣೆ ಅಂಗವಾಗಿ ರಾಜ್ಯಮಟ್ಟದ ಯುವ ರೆಡ್ ಕ್ರಾಸ್ ರಸಪ್ರಶ್ನೆ ಕಾರ್ಯಕ್ರಮವನ್ನು ಇದೇ 12ರಂದು ರೇಸ್‍ಕೋರ್ಸ್‍ನ ಜೀನ್ ಹೆನ್ರಿ ಡೂನಾಂಟ್ ಸಭಾಂಗಣದಲ್ಲಿ ಆಯೋಜಿಸಲಾಗಿದೆ ಎಂದು ಸಂಸ್ಥೆಯ ಸಭಾಪತಿ ಬಸ್ರೂರ್ ರಾಜೀವ್ ಶೆಟ್ಟಿ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಂಸ್ಥೆ ಅನೇಕ ಪ್ರಮುಖ ಚಟುವಟಿಕೆಗಳನ್ನು ನಡೆಸುತ್ತಾ ಬಂದಿದೆ. ಈ ಬಾರಿ ಮಕ್ಕಳಲ್ಲಿ ಅರಿವು ಮೂಡಿಸುವ ಸಲುವಾಗಿ 3ನೇ ರಾಜ್ಯಮಟ್ಟದ ರಸಪ್ರಶ್ನೆ ಆಯೋಜಿಸಲಾಗಿದೆ ಎಂದು ಹೇಳಿದರು.

ಸಂಸ್ಥೆಯ ರಾಷ್ಟ್ರೀಯ ಶಾಖೆಯ ಕಾರ್ಯದರ್ಶಿ ಆರ್.ಕೆ.ಜೈನ್ ಉದ್ಘಾಟಿಸಲಿದ್ದು, ಕ್ವೀಜ್ ಮಾಸ್ಟರ್ ತಟ್ ಅಂತ ಹೇಳಿ ಡಾ.ನಾ.ಸೋಮೇಶ್ವರ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. ರಾಜ್ಯದ 15 ವಿಶ್ವವಿದ್ಯಾಲಯಗಳ ವಿವಿಧ ಕಾಲೇಜಿನ 100 ಕ್ಕೂ ಹೆಚ್ಚಿನ ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ವಿವರಿಸಿದರು.
ಸುದ್ದಿಗೋಷ್ಟಿಯಲ್ಲಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಪ್ರಶಾಂತ ಚಂದ್ರಶೇಖರ್ ಉಪಸ್ಥಿತರಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ