ಕಟ್ಟಡವೊಂದರ 6ನೇ ಮಹಡಿಯಿಂದ ಬಿದ್ದು ವ್ಯಕ್ತಿಯ ಸಾವು

ಬೆಂಗಳೂರು,ಜ.12ಮೂಲತಃ ಚಿತ್ರದುರ್ಗ ಜಿಲ್ಲೆ ನಾಯಕನಹಟ್ಟಿ ನಿವಾಸಿ ನಾಗೇಶ್(35) ಸಾವನ್ನಪ್ಪಿರುವ ವ್ಯಕ್ತಿ. ಗಾರೆಕೆಲಸ ಮಾಡುತ್ತಿದ್ದ ಈತ ಪ್ರತಿನಿತ್ಯ ಅತ್ತಿಬೆಲೆ-ಚಂದಪುರ ಸೇರಿದಂತೆ ವಿವಿಧ ಕಡೆ ಗಾರೆಕೆಲಸ ಮಾಡಿಕೊಂಡು ಬಂದು ಶಾಂತಿನಗರ ಬಸ್ ನಿಲ್ದಾಣದಲ್ಲಿ ಮಲಗುತ್ತಿದ್ದರು.

ಇಂದು ಬೆಳಗಿನ ಜಾವ 2.30ರ ಸುಮಾರಿನಲ್ಲಿ ಶಾಂತಿನಗರ ಸಮೀಪದ ಸ್ವಾತಿ ಡೀಲಕ್ಸ್ ಹೋಟೆಲ್ ಬಳಿಯ ಬಹುಮಹಡಿ ಕಟ್ಟಡದ 6ನೇ ಮಹಡಿಯಿಂದ ಬಿದ್ದು ಇವರು ಮೃತಪಟ್ಟಿದ್ದಾರೆ.

ಸುದ್ದಿ ತಿಳಿದ ವಿಲ್ಸನ್‍ಗಾರ್ಡನ್ ಠಾಣೆ ಪೊಲೀಸರು ಸ್ಥಳಕ್ಕೆ ತೆರಳಿ ಪರಿಶೀಲಿಸಿದ್ದು, ಈ ವ್ಯಕ್ತಿ ಕಾಲುಜಾರಿ ಬಿದ್ದಿರಬಹುದೆಂಬ ಶಂಕೆ ವ್ಯಕ್ತವಾಗಿದ್ದು, ಈ ನಿಟ್ಟಿನಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ