ವಿವೇಕಾನಂದರು ಮಹಾನ್ ಸಂತರಾಗಿದ್ದರು ಎಂದು ಹೇಳಿದ ಸಚಿವ ವೆಂಕಟರಾವ್ ನಾಡಗೌಡ

ಬೆಂಗಳೂರು,ಜ.12-ಜೆಡಿಎಸ್ ಕಚೇರಿ ಜೆಪಿಭವನದಲ್ಲಿಂದು ಸ್ವಾಮಿ ವಿವೇಕಾನಂದರ ಜಯಂತಿ ಅಂಗವಾಗಿ ನಡೆದ ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಸಚಿವ ವೆಂಕಟರಾವ್ ನಾಡಗೌಡ ಅವರು, ವಿವೇಕಾನಂದರು ಮಹಾನ್ ಸಂತರಾಗಿದ್ದರು ಎಂದು ಹೇಳಿದರು. ಯುವ ಪೀಳಿಗೆಗೆ ವಿವೇಕಾನಂದರ ಆದರ್ಶಗಳನ್ನು ಅನುಸರಿಸುವಂತೆ ಮನವರಿಕೆ ಮಾಡಿಕೊಟ್ಟಾಗ ದಿನಾಚರಣೆಗೆ ಅರ್ಥ ಬರುತ್ತದೆ ಎಂದು ಅಭಿಪ್ರಾಯಪಟ್ಟರು.

ಸ್ವಾಮಿ ವಿವೇಕಾನಂದರ ಬಗ್ಗೆ ಅಮೆರಿಕದಲ್ಲೂ ಮೆಚ್ಚುಗೆ ವ್ಯಕ್ತವಾಗಿದೆ.ಅವರ ದಿನಾಚರಣೆ ಸೂರ್ಯ-ಚಂದ್ರರು ಇರುವವರೆಗೂ ನಡೆಯುತ್ತದೆ. ಅದೇ ರೀತಿ ಬುದ್ಧ, ಬಸವಣ್ಣ, ಗಾಂಧೀಜಿ ಸೇರಿದಂತೆ ಮಹಾನ್ ನಾಯಕರು ಇತಿಹಾಸದ ಪುಟಗಳಲ್ಲಿ ಅಚ್ಚಳಿಯದೆ ಉಳಿದಿದ್ದಾರೆ. ಅವರ ಆದರ್ಶಗಳೂ ಸಹ ಬದುಕಿಗೆ ಮುಖ್ಯ ಎಂದು ಹೇಳಿದರು.

ಜೆಡಿಎಸ್ ರಾಜ್ಯ ಕಾರ್ಯಾಧ್ಯಕ್ಷ ನಾರಾಯಣರಾವ್, ಬೆಂಗಳೂರು ನಗರ ಘಟಕ ಅಧ್ಯಕ್ಷ ಆರ್.ಪ್ರಕಾಶ್, ಮುಖಂಡರಾದ ರಾಜಣ್ಣ , ಹರೀಶ್, ನಾರಾಯಣಸ್ವಾಮಿ, ಚಂದ್ರಶೇಖರ್, ಮತ್ತಿತರರು ಪಾಲ್ಗೊಂಡಿದ್ದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ