ಪತ್ನಿಯನ್ನು ಕೊಲೆ ಮಾಡಿದ ಪತಿಯನ್ನು ಬಂಧಿಸಿದ ಪೊಲೀಸರು

ಬೆಂಗಳೂರು, ಜ.14-ಪತ್ನಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ ತಲೆ ಮೇಲೆ ಕಲ್ಲು ಎತ್ತಿಹಾಕಿದ್ದ ಆರೋಪಿ ಪತಿಯನ್ನು ರಾಮಮೂರ್ತಿನಗರ ಠಾಣೆ ಪೆÇಲೀಸರು ಬಂಧಿಸಿದ್ದಾರೆ.

ಮೂಲತಃ ಬಿಹಾರದ ಬಾಲಟೋಲ ಗ್ರಾಮದ ವಿನಯ್‍ಕುಮಾರ್ (31)ಬಂಧಿತ ಆರೋಪಿ.
ಆರು ವರ್ಷಗಳ ಹಿಂದೆ ಗೀತಾದೇವಿ ಎಂಬುವರನ್ನು ಮದುವೆಯಾಗಿದ್ದ ವಿನಯ್‍ಕುಮಾರ್ ದಂಪತಿಗೆ ಇಬ್ಬರು ಮಕ್ಕಳಿದ್ದು, ರಾಮಮೂರ್ತಿನಗರದ ಹೊರಮಾವು ಮುಖ್ಯರಸ್ತೆ ಪ್ರೇರಣಾ ಟ್ರಾಕ್ಯೂಲ್ ಅಪಾರ್ಟ್‍ಮೆಂಟ್ ಶೆಡ್‍ನಲ್ಲಿ ವಾಸವಿದ್ದರು.

ಈ ಅಪಾರ್ಟ್‍ಮೆಂಟ್‍ನಲ್ಲಿ ಸೆಕ್ಯೂರಿಟಿ ಕೆಲಸ ಮಾಡಿಕೊಂಡಿದ್ದ ವಿನಯ್‍ಕುಮಾರ್ ವಿನಾಕಾರಣ ಪತ್ನಿಯೊಂದಿಗೆ ಜಗಳವಾಡುತ್ತಿದ್ದನು. ಆಗಾಗ್ಗೆ ಕೊಲೆ ಮಾಡುವುದಾಗಿಯೂ ಜೀವ ಬೆದರಿಕೆ ಹಾಕುತ್ತಿದ್ದ ಈತ ನಿನ್ನೆ ಬೆಳಗಿನ ಜಾವ 3 ಗಂಟೆ ಸುಮಾರಿಗೆ ಪತ್ನಿಯೊಂದಿಗೆ ಜಗಳವಾಡಿ ಆಕೆಯ ಕತ್ತು ಹಿಸುಕಿ ಕೊಲೆ ಮಾಡಿ ನಂತರ ಅಪಾರ್ಟ್‍ಮೆಂಟ್‍ನ ಪಾರ್ಕಿಂಗ್ ಸ್ಥಳದಲ್ಲಿ ಶವವನ್ನು ತಂದು ಕಲ್ಲನ್ನು ತಲೆ ಮೇಲೆ ಎತ್ತಿಹಾಕಿದ್ದನು.

ಈ ಬಗ್ಗೆ ಗೀತಾದೇವಿ ಅವರ ಸಹೋದರ ಗುಡ್ಡುಭಾಗತ್ ನೀಡಿದ ದೂರಿನ ಮೇರೆಗೆ ರಾಮಮೂರ್ತಿನಗರ ಠಾಣೆ ಪೆÇಲೀಸರು ವಿನಯ್‍ಕುಮಾರ್‍ನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದಾಗ ಕೌಟುಂಬಿಕ ವಿಷಯವಾಗಿ ಪತ್ನಿಯೊಂದಿಗೆ ಜಗಳವಾಡಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ