ಎಲ್ಲೆಂದರಲ್ಲಿ ನಾಗರಿಕರು ಕಸ ಹಾಕಿದರೆ ಬಿಬಿಎಂಪಿಯಿಂದ ದಂಡ

ಬೆಂಗಳೂರು,ಜ.14-ನಾಳೆ ಸಂಕಾಂತಿ ಹಬ್ಬ ಹಿನ್ನಲೆ, ಹಬ್ಬ ಆಚರಿಸುವ ಜನರೇ ತ್ಯಾಜ್ಯಗಳನ್ನು ಸಮರ್ಪಕವಾಗಿ ವಿಲೇವಾರಿ ಮಾಡಬೇಕು.ಬಿಬಿಎಂಪಿ ನಿಗದಿಪಡಿಸಿರುವ ಜಾಗದಲ್ಲೇ ತ್ಯಾಜ್ಯ ಹಾಕಬೇಕು.ಅದನ್ನು ಬಿಟ್ಟು ಎಲ್ಲೆಂದರಲ್ಲಿ ಕಸ ಹಾಕಿದರೆ ದಂಡ ಕಟ್ಟಿಟ್ಟ ಬುತ್ತಿ ಎಂದು ಬಿಬಿಎಂಪಿ ವಿಶೇಷ ಆಯುಕ್ತ ರಂದೀಪ್ ಎಚ್ಚರಿಸಿದ್ದಾರೆ.

ಈಗಾಗಲೇ ಬಿಬಿಎಂಪಿಯ 8 ವಲಯಗಳಲ್ಲಿ ಮಾರ್ಷಲ್‍ಗಳನ್ನು ನೇಮಿಸಲಾಗಿದೆ.ಮಾರ್ಷಲ್‍ಗಳು ಎಲ್ಲೆಡೆ ನಿಗಾ ಇರಿಸಿದ್ದಾರೆ.ಒಂದು ವೇಳೆ ಯಾರಾದರೂ ಎಲ್ಲೆಂದರಲ್ಲಿ ಕಸ ಹಾಕಿದರೆ ಅವರಿಗೆ ಸ್ಥಳದಲ್ಲೇ ದಂಡ ವಿಧಿಸುತ್ತಾರೆ.
ಈಗಾಗಲೇ ಮಾರ್ಷಲ್‍ಗಳು ಕಾರ್ಯಪ್ರವೃತ್ತರಾಗಿದ್ದು, ಹದ್ದಿನ ಕಣ್ಣು ಇಟ್ಟಿದ್ದಾರೆ.ಈವರೆಗೆ ಎಲ್ಲೆಂದರಲ್ಲಿ ಕಸ ಹಾಕುವವರಿಂದ 17 ಲಕ್ಷ ರೂ.ದಂಡ ವಸೂಲಿ ಮಾಡಲಾಗಿದೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ