ತಂತ್ರಕ್ಕೆ ಪ್ರತಿತಂತ್ರ ಹೂಡುವ ಶಕ್ತಿ ಕಾಂಗ್ರೇಸ್ಸಿಗಿದೆ ಸಚಿವ ಡಿ.ಕೆ.ಶಿವಕುಮಾರ್

ಬೆಂಗಳೂರು,ಜ.15- ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಡಿ.ಕೆ.ಶಿವಕುಮಾರ್ ಅವರು, ಸರ್ಕಾರ ಅಸ್ಥಿರಗೊಳಿಸಲು ಬಿಜೆಪಿ ಹೆಣೆದಿರುವ ತಂತ್ರಕ್ಕೆ ಪ್ರತಿ ತಂತ್ರ ಹೆಣೆಯುವ ಶಕ್ತಿ ಕಾಂಗ್ರೆಸ್ ಪಕ್ಷಕ್ಕೂ ಇದೆ ಎಂದು ಹೇಳಿದರು.

ಕಾಂಗ್ರೆಸ್ ಪಕ್ಷದ ಅತೃಪ್ತ ಶಾಸಕರು ಬಿಜೆಪಿ ಸಂಪರ್ಕದಲ್ಲಿದ್ದಾರೆ ಎಂಬುದು ಸುಳ್ಳು.ಯಾರೂ ಕೂಡಾ ಬಿಜೆಪಿಯೊಂದಿಗೆ ಹೋಗಿಲ್ಲ. ಆನಂದ್ ಸಿಂಗ್ ಕೂಡ ನಮ್ಮೊಂದಿಗೇ ಇದ್ದಾರೆ.ಸುಖಾಸುಮ್ಮನೆ ಸುಳ್ಳು ಸುದ್ದಿಗಳನ್ನು ಬಿಜೆಪಿ ಪ್ರಚುರಪಡಿಸುತ್ತಿದೆ ಎಂದು ಹೇಳಿದರು.

ಒಂದು ವೇಳೆ ಬಿಜೆಪಿ ಕಾಂಗ್ರೆಸ್ ಶಾಸಕರನ್ನು ಸೆಳೆಯುವ ಪ್ರಯತ್ನ ಮಾಡಿದರೆ ಅವರನ್ನು ಮತ್ತೆ ಕರೆತರುವ ತಾಕತ್ತು ನಮಗಿದೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ