ಆಪರೇಷನ್ ಕಮಲ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ

ದೊಡ್ಡಬಳ್ಳಾಪುರ: ಆಪರೇಷನ್ ಕಮಲದ ವಿರುದ್ಧ ಕಾಂಗ್ರೆಸ್ ಕಾರ್ಯಕರ್ತರು ನಗರದ ತಾಲೂಕು ಕಚೇರಿ ವೃತ್ತದ ಬಳಿ ಪ್ರತಿಭಟನೆ ನಡೆಸಿದರು ಪ್ರತಿಭಟನೆ ನಡೆಸಿದರು

ರಾಜ್ಯದಲ್ಲಿರುವ ಸಮ್ಮಿಶ್ರ ಸರ್ಕಾರ ಬೀಳಿಸಲು ಶತಾಯಗತಾಯ ಯತ್ನ ನಡೆಸುತ್ತಿರುವ ಬಿಜೆಪಿ ಆಪರೇಷನ್ ಕಮಲಕ್ಕೆ ಮುಂದಾಗಿದೆ. ಹರಿಯಾಣದ ರೆಸಾರ್ಟ್​ನಲ್ಲಿ ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಮೂಲಕ ಆಪರೇಷನ್ ಕಮಲ ಶುರುಮಾಡಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ರೆಸಾರ್ಟ್​ಗೆ ಸುರಿಯುವ ಹಣವನ್ನ ರೈತರ ಸಾಲಮನ್ನಾಕ್ಕೆ ಬಳಸಬಹುದಿತ್ತು. ಒಬ್ಬೊಬ್ಬ ಶಾಸಕರಿಗೆ 50 ಕೋಟಿ ಕೊಡಲು ಅವರಲ್ಲಿ ಹಣವಿದೆ. ಅದರೆ ರೈತರ ಸಾಲ ಮನ್ನಾ ಮಾಡಲು ಅವರ ಬಳಿ ಹಣವಿಲ್ಲ. ಮುಂದಿನ ದಿನಗಳಲ್ಲಿ ಜನರೇ ಪಾಠ ಕಲಿಸುತ್ತಾರೆಂದು ಕಾಂಗ್ರೆಸ್ ಮುಖಂಡರು ಬಿಜೆಪಿ ಪಕ್ಷದ ವಿರುದ್ಧ ವಾಗ್ದಾಳಿ ನಡೆಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ