ಯಡಿಯೂರಪ್ಪನವರೇ ಆಪರೇಷನ್ ಎಂಬ ಪದ ಪ್ರಾರಂಭಿಸಿದ್ದು!ಸಿದ್ದರಾಮಯ್ಯ

ಬೆಂಗಳೂರು, ಜ.17- ಆಪರೇಷನ್ ಎಂಬ ಪದವನ್ನು ಪ್ರಾರಂಭಿಸಿದ್ದೇ ಯಡಿಯೂರಪ್ಪನವರು.ಪ್ರಜಾಪ್ರಭುತ್ವದಲ್ಲಿ ಇದೊಂದು ರೋಗ ಇದ್ದ ಹಾಗೆ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಹುಬ್ಬಳ್ಳಿಯಲ್ಲಿ ಆಪರೇಷನ್ ಕಮಲ ವಿಚಾರ ಸಂಬಂಧ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಅವರ ಶಾಸಕರ ಮೇಲೆಯೇ ನಂಬಿಕೆ ಇಲ್ಲ. ಹಾಗಾಗಿ ಅವರನ್ನು ದೂರದ ಹರಿಯಾಣ ರೆಸಾರ್ಟ್‍ನಲ್ಲಿ ಇಟ್ಟಿದ್ದಾರೆ. ಇದು ಒಂದು ಅಸಹ್ಯ ರಾಜಕಾರಣ ಎಂದು ಹೇಳಿದರು.
ನಮ್ಮ ಪಕ್ಷದವರು ಯಾರೂ ಬಿಜೆಪಿಗೆ ಹೋಗುವುದಿಲ್ಲ. ನಾವು ಯಾರಿಗೂ ಮಂತ್ರಿಗಿರಿ ನೀಡುವ ಭರವಸೆ ನೀಡಿಲ್ಲ. ಸದ್ಯಕ್ಕೆ ಮಂತ್ರಿಮಂಡಲದಲ್ಲಿ ಯಾವ ಬದಲಾವಣೆಯೂ ಇಲ್ಲ ಎಂದು ಹೇಳಿದರು.
ನಾಳೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಕರೆದಿದ್ದು, ಎಲ್ಲರೂ ಅದರಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ