ಕಾಂಗ್ರೇಸ್ಸಿನ ಯಾವ ಶಾಸಕರು ಪಕ್ಷ ಬಿಡುವುದಿಲ್ಲ ದಿನೇಶ್ ಗುಂಡುರಾವ್

ಬೆಂಗಳೂರು, ಜ.18- ಕುಮಾರಕೃಪಾ ಅತಿಥಿ ಗೃಹದಲ್ಲಿ ಕಾಂಗ್ರೆಸ್ ಉಸ್ತುವಾರಿ ನಾಯಕ ಕೆ.ಸಿ.ವೇಣುಗೋಪಾಲ್ ಅವರ ಜತೆ ರಹಸ್ಯ ಸಭೆ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡುರಾವ್ ಅವರು, ಕಾಂಗ್ರೆಸ್‍ನ ಯಾವ ಶಾಸಕರೂ ಪಕ್ಷ ಬಿಡುತ್ತಿಲ್ಲ. ಸರ್ಕಾರ ಸುಭದ್ರವಾಗಿದೆ. ಐದು ವರ್ಷ ಸುಸ್ಥಿರ ಆಡಳಿತ ನಡೆಸಲಿದೆ ಎಂದು ಹೇಳಿದರು.

ಬಿಜೆಪಿಯವರ ಪ್ರಯತ್ನಗಳು ಸಂಪೂರ್ಣ ವಿಫಲವಾಗಿದೆ.ಕಾಂಗ್ರೆಸ್‍ನ ಯಾವ ಶಾಸಕರೂ ಬಿಜೆಪಿಯವರ ಜತೆ ಇಲ್ಲ. ಎಲ್ಲರೂ ನಮ್ಮ ಸಂಪರ್ಕದಲ್ಲಿದ್ದಾರೆ.ಇಂದು ಶಾಸಕಾಂಗ ಸಭೆಗೆ ಎಲ್ಲರೂ ಭಾಗವಹಿಸುವುದನ್ನು ನೀವು ನೋಡುತ್ತೀರಿ.ಸಭೆಗೂ ಮೊದಲು ಅಲ್ಲಿ ನಡೆಯುವ ಚರ್ಚೆ, ತೆಗೆದುಕೊಳ್ಳುವ ನಿರ್ಧಾರಗಳ ಬಗ್ಗೆ ಈಗ ಚರ್ಚಿಸುವುದು ಸರಿಯಲ್ಲ ಎಂದರು.
ಬಿಜೆಪಿ ರಚನಾತ್ಮಕ ವಿರೋಧ ಪಕ್ಷವಾಗಿ ಕೆಲಸ ಮಾಡಬೇಕಿತ್ತು.ಅದನ್ನು ಬಿಟ್ಟು ಗುರುಗ್ರಾಮದ ಪಂಚತಾರಾ ಹೋಟೆಲ್‍ನಲ್ಲಿ ಶಾಸಕರನ್ನು ಕೂಡಿಹಾಕಿ ಐಷಾರಾಮಿ ಜೀವನ ನಡೆಸುತ್ತಿದೆ.ಇಲ್ಲಿ ಬರ ಪರಿಸ್ಥಿತಿ ಇದೆ.ಇದರ ಬಗ್ಗೆ ಚರ್ಚೆ ಮಾಡದೆ ಬರ ಕಾಮಗಾರಿಗಳಲ್ಲಿ ತೊಡಗಿಸಿಕೊಳ್ಳದೆ ಶಾಸಕರು ಹೋಟೆಲ್‍ನಲ್ಲಿ ಕುಳಿತಿರುವುದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ