ಚಿಕಿತ್ಸೆ ಪಡೆಯುತ್ತಿರುವ ಆನಂದ್ ಸಿಂಗ್ ಅವರನ್ನು ನೋಡಲು ಬಿಡುತ್ತಿಲ್ಲ : ಶಾಸಕ ರಾಜೂಗೌಡ

ಬೆಂಗಳೂರು,ಜ.20- ಬಿಡದಿಯ ಈಗಲ್ ಟನ್ ರೆಸಾರ್ಟ್‍ನಲ್ಲಿ ತಡರಾತ್ರಿ ನಡೆದ ಗಲಾಟೆಯಲ್ಲಿ ಗಾಯಗೊಂಡು ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಶಾಸಕ ಆನಂದ್ ಸಿಂಗ್‍ರನ್ನು ನೋಡಲು ಬಿಡುತ್ತಿಲ್ಲ ಎಂದು ಬಿಜೆಪಿ ಶಾಸಕ ರಾಜೂಗೌಡ ತಿಳಿಸಿದ್ದಾರೆ.

ಆನಂದ್ ಸಿಂಗ್ ನನ್ನ ಸ್ನೇಹಿತ. ವಿಚಾರ ತಿಳಿದು ಅವರ ಆರೋಗ್ಯ ವಿಚಾರಿಸಲು ಆಸ್ಪತ್ರೆಗೆ ಬಂದಿದ್ದೇನೆ. ಆದರೆ ನನಗೆ ಅವರನ್ನು ನೋಡಲು ಅವಕಾಶ ನೀಡಲಾಗಿಲ್ಲ. ಹಾಗಾಗಿ ನಿರಾಸೆಯಿಂದಲೇ ಹೊರಬಂದಿದ್ದೇನೆ ಎಂದು ಸುದ್ದಿಗಾರರಿಗೆ ತಿಳಿಸಿದರು.

ಭೇಟಿಯಲ್ಲಿ ಯಾವುದೇ ರಾಜಕೀಯ ಉದ್ದೇಶಗಳಿಲ್ಲ. ಮೊದಲಿನಿಂದಲೂ ನಾನು, ಆನಂದ್ ಸಿಂಗ್ ಸ್ನೇಹಿತರು. ಹಾಗಾಗಿ ಅವರು ಆಸ್ಪತ್ರೆಗೆ ಸೇರಿರುವ ವಿಚಾರ ತಿಳಿದು ಬಂದಿದ್ದೇನೆ ಎಂದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ