ಶ್ರೀಗಳ ಅಗಲಿಕೆಯಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಮಾಜಿ ಪ್ರಧಾನಿ ದೇವೆಗೌಡ

ಬೆಂಗಳೂರು, ಜ.21-ಕಲಿಯುಗದ ನಡೆದಾಡುವ ದೇವರು ಡಾ.ಶ್ರೀ ಶಿವಕುಮಾರಸ್ವಾಮೀಜಿಯವರ ಅಗಲಿಕೆಯಿಂದ ಮನಸ್ಸಿಗೆ ತೀವ್ರ ನೋವುಂಟಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಸಂತಾಪ ಸೂಚಿಸಿದ್ದಾರೆ.

ನಮ್ಮೆಲ್ಲರ ಆರಾಧ್ಯ ದೈವ ಶ್ರೀ ಶಿವಕುಮಾರಸ್ವಾಮೀಜಿಯವರು ಈ ಜಗತ್ತು ಕಂಡ ಜ್ಞಾನ ಭಂಡಾರ. ಶ್ರೀ ಸಿದ್ದಗಂಗಾ ವಿದ್ಯಾಸಂಸ್ಥೆಯ ಸಂಸ್ಥಾಪಕರೂ ಆದ ಶ್ರೀಗಳ ಸಾನಿಧ್ಯದಲ್ಲಿ ಬೆಳೆದ ಅನೇಕ ವಿದ್ಯಾರ್ಥಿಗಳು ಇಂದು ಉನ್ನತ ಮಟ್ಟಕ್ಕೆ ಬೆಳೆದಿದ್ದಾರೆ. ಸ್ವಾಮೀಜಿಯವರು ಈ ಸಮಾಜಕ್ಕೆ ಉತ್ತಮ ಸಂದೇಶಗಳನ್ನು ನೀಡಿದ್ದಾರೆ.ಅವರ ಆದರ್ಶ ನಮ್ಮೊಡನೆ ಅಜರಾಮರವಾಗಿರುತ್ತದೆ ಎಂದು ತಿಳಿಸಿದರು.

ಶ್ರೀಗಳು ಜನಿಸಿದ ಪುಣ್ಯಭೂಮಿಯಲ್ಲಿ ನಾವೆಲ್ಲ ಜನಿಸಿರುವುದು ನಮ್ಮ ಅದೃಷ್ಟ.ಅವರು ಹಾಕಿಕೊಟ್ಟಿರುವ ಮಾರ್ಗದರ್ಶನದಲ್ಲಿ ನಾವೆಲ್ಲ ಮುಂದೆ ಸಾಗಬೇಕಾಗಿದೆ ಎಂದು ಹೇಳಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ