ಶ್ರೀಗಳಿಗೆ ಭಕ್ತಿನಮನ ಮತ್ತು ಶ್ರದ್ಧಾಂಜಲಿ ಸಭೆ ನಡೆಸಿದ ಕನ್ನಡ ಪರ ಸಂಘಟನೆಗಳು

ಬೆಂಗಳೂರು, ಜ.22-ಶ್ರೀ ಸಿದ್ಧಗಂಗಾ ಕ್ಷೇತ್ರಾಧ್ಯಕ್ಷರು, ನಡೆದಾಡುವ ದೇವರು ಕರ್ನಾಟಕ ರತ್ನ, ಪದ್ಮಭೂಷಣ, ಶತಾಯುಷಿ ಡಾ.ಶ್ರೀ ಶಿವಕುಮಾರಸ್ವಾಮೀಜಿ ಶಿವೈಕ್ಯರಾಗಿದ್ದಕ್ಕೆ ಬೆಂಗಳೂರಿನ ಕನ್ನಡ ಪರ ಸಂಘಟನೆಗಳು ಮೈಸೂರು ಬ್ಯಾಂಕ್ ವೃತ್ತದಲ್ಲಿ ಭಕ್ತಿನಮನ ಮತ್ತು ಶ್ರದ್ಧಾಂಜಲಿ ಸಭೆ ನಡೆಸಲಾಯಿತು.

ಅಖಿಲ ಕರ್ನಾಟಕ ಕನ್ನಡ ಕಣ್ಮಣಿ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಸಂಸ್ಥೆ ಮತ್ತು ಕರ್ನಾಟಕ ವಿಚಾರ ವೇದಿಕೆ, ವಿವಿಧ ಕನ್ನಡ ಪರ ಸಂಘಟನೆಗಳ ಆಶ್ರಯದಲ್ಲಿ ಇಂದು ಡಾ.ಶ್ರೀ ಶಿವಕುಮಾರಸ್ವಾಮೀಜಿಯವರಿಗೆ ಅಖಿಲ ಕರ್ನಾಟಕ ಡಾ.ಅಭಿಮಾನಿಗಳ ಸಂಘದ ಅಧ್ಯಕ್ಷರಾದ ಸಾ.ರಾ.ಗೋವಿಮದು ಅವರು ಭಕ್ತಿ ನಮನಗಳನ್ನು ಸಲ್ಲಿಸಿದರು.

ಪರಮಪೂಜ್ಯ ಡಾ.ಶಿವಕುಮಾರಸ್ವಾಮೀಜಿಯವರು ಹಸಿದ ಹೊಟ್ಟೆಗೆ, ಅನ್ನ, ನೆತ್ತಿಗೆ ಜ್ಞಾನ ಮತ್ತು ಗ್ರಾಮಾಂತರ ಬಡ ವಿದ್ಯಾರ್ಥಿಗಳಿಗೆ ಆಶ್ರಯ ನೀಡಿ ಅವರುಗಳ ಬದುಕಿಗೆ ಬೆಳಕಾಗಿದ್ದವರು. ಧಾರ್ಮಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಕ್ಷೇತ್ರದಲ್ಲಿ ಅವರು ಸಲ್ಲಿಸಿರುವ ಸೇವೆ ಸ್ಮರಣೀಯ. ಪರಮ ಪೂಜ್ಯರಿಗೆ ಈಗಲಾದರೂ ಕೇಂದ್ರ ಸರ್ಕಾರ ಭಾರತ ರತ್ನ ಪುರಸ್ಕಾರ ನೀಡಿ ಗೌರವಿಸಲೆಂದು ಆಗ್ರಹಿಸಿದರು.

ಕನ್ನಡ ಕಣ್ಮಣಿ ಡಾ.ರಾಜ್‍ಕುಮಾರ್ ಸಾಂಸ್ಕøತಿಕ ಸಂಸ್ಥೆಯ ಅಧ್ಯಕ್ಷ ಬಿ.ಎ.ಧರಣೀಶ್, ಕರ್ನಾಟಕ ವಿಚಾರ ವೇದಿಕೆ ಅಧ್ಯಕ್ಷ ಪಾಲನೇತ್ರ, ಕರುನಾಡ ಸಿರಿ ಸಾಹಿತ್ಯ ವೇದಿಕೆ ಅಧ್ಯಕ್ಷ ಹನುಮಂತರಾಯ, ಕನ್ನಡ ಸಾಂಸ್ಕøತಿಕ ಕ್ರಿಯಾ ಸಮಿತಿ ಅಧ್ಯಕ್ಷ ಎನ್.ವೇಣುಗೋಪಾಲ್ ಮತ್ತಿತರರು ಪೂಜ್ಯರಿಗೆ ನುಡಿನಮನ ಸಲ್ಲಿಸಿ ಕೇಂದ್ರ ಸರ್ಕಾರ ಕೂಡಲೇ ಭಾರತ ರತ್ನ ಪ್ರಶಸ್ತಿ ನೀಡಬೇಕೆಂದು ಆಗ್ರಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ