ಶ್ರೀಗಳಿಗೆ ಅಂತಿಮ ನಮನ ಸಲ್ಲಿಸಿದ ಕೇಂದ್ರ ಸಚಿವರು

ತುಮಕೂರು, ಜ.22-ಶತಮಾನದ ಮಹಾಸಂತ, ತ್ರಿವಿಧ ದಾಸೋಹಿ ಹಾಗೂ ಸಿದ್ಧಗಂಗಾ ಮಠಾಧೀಶರಾದ ಶ್ರೀ ಡಾ.ಶಿವಕುಮಾರ ಸ್ವಾಮೀಜಿ ಅವರ ಅಂತ್ಯಕ್ರಿಯೆಯಲ್ಲಿ ಕೇಂದ್ರ ಸರ್ಕಾರದ ಪರವಾಗಿ ರಕ್ಷಣಾ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಅಂಕಿ-ಅಂಶ ಮತ್ತು ಯೋಜನಾ ಅನುಷ್ಟಾನ ಸಚಿವ ಡಿ.ವಿ.ಸದಾನಂದ ಗೌಡ ಅವರು ಪಾಲ್ಗೊಂಡು ಅಂತಿಮ ನಮನ ಸಲ್ಲಿಸಿದರು.

ಕೇಂದ್ರ ಸಚಿವರು ಇಂದು ಬೆಳಗ್ಗೆ ರಾಜಧಾನಿ ದೆಹಲಿಯಿಂದ ವಿಮಾನದಲ್ಲಿ ಆಗಮಿಸಿ ತುಮಕೂರಿಗೆ ತೆರಳಿ ಶ್ರೀಗಳ ಅಂತಿಮ ದರ್ಶನ ಪಡೆದರು.ಮಹಾ ಮಹಿಮರ ಗುಣಗಾನ ಮಾಡಿದ ನಿರ್ಮಲಾ ಮತ್ತು ಸದಾನಂದ ಗೌಡರು ನಂತರ ಸ್ವಾಮೀಜಿಯವರ ಅಂತ್ಯಕ್ರಿಯೆಯಲ್ಲಿ ಭಾಗವಹಿಸಿದರು.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ