ಸಾಲ ಬಾದೆಯಿಂದ ಆತ್ಮಹತ್ಯೆ ಮಾಡಿಕೊಂಡ ಕಾರು ಚಾಲಕ

Execution Sling Hanging Hangman Knot Penalty Rope

ಮೈಸೂರು, ಜ.23-ಸಾಲ ಬಾಧೆಯಿಂದ ಕಾರು ಚಾಲಕ ಸಾವಿಗೆ ಶರಣಾಗಿರುವ ಘಟನೆ ನಗರದಲ್ಲಿ ನಡೆದಿದೆ.

ನಗರದ ಕೆ.ಜಿ.ಕೊಪ್ಪಲಿನ ವಾಸಿ ಗಂಗಾಧರ್ (46) ಆತ್ಮಹತ್ಯೆ ಮಾಡಿಕೊಂಡಿರುವ ಕಾರು ಚಾಲಕ. ಕಾರು ಚಾಲಕನಾಗಿ ಕೆಲಸ ಮಾಡುತ್ತಿದ್ದ ಈತ ಲಕ್ಷಾಂತರ ರೂ.ಕೈ ಸಾಲ ಮಾಡಿಕೊಂಡಿದ್ದ.

ಸಾಲಗಾರರ ಕಾಟ ತಡೆಯಲಾಗದೆ ಮನೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮನೆಯವರಿಗೆ ಬೆಳಿಗ್ಗೆ ಈ ವಿಷಯ ಗೊತ್ತಾಗಿದೆ.

ಈ ಬಗ್ಗೆ ಸರಸ್ವತಿಪುರಂ ಠಾಣೆ ಪೆÇಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಸ್ಥಳೀಯ ಸುದ್ದಿ ಮತ್ತು ವೇಗದ ವಿತರಣೆಗಾಗಿ ನಮ್ಮ Android ಅಪ್ಲಿಕೇಶನ್ ಅನ್ನು ಡೌನ್ಲೋಡ್ ಮಾಡಿ